ಸುಖವಿಂದರ್ ಸಿಂಗ್ 
ಜಿಲ್ಲಾ ಸುದ್ದಿ

ಸಿಲಿಕಾನ್ ಸಿಟಿಯಲ್ಲಿ ಸುಖವಿಂದರ್ ಸಿಂಗ್ ಗಾಯನದ ಮಿಂಚು

ಇಂಪೀರಿಯಲ್ ಬ್ಲೂ ಸೂಪರ್‍ಹಿಟ್ ನೈಟ್ಸ್ ಇಂದು ರಾತ್ರಿ ಬೆಂಗಳೂರಿನಲ್ಲಿ ಸಂಚಲನ ಮೂಡಿಸಲಿದ್ದು, ಖ್ಯಾತ ಬಾಲಿವುಡ್...

ಬೆಂಗಳೂರು: ಇಂಪೀರಿಯಲ್ ಬ್ಲೂ ಸೂಪರ್‍ಹಿಟ್ ನೈಟ್ಸ್ ಇಂದು ರಾತ್ರಿ ಬೆಂಗಳೂರಿನಲ್ಲಿ ಸಂಚಲನ ಮೂಡಿಸಲಿದ್ದು, ಖ್ಯಾತ ಬಾಲಿವುಡ್ ಗಾಯಕ ಸುಖವಿಂದರ್ ಸಿಂಗ್ ತಮ್ಮ ಗಾಯನದ ಮೂಲಕ ಮಿಂಚು ಹರಿಸಲಿದ್ದಾರೆ. ಬಹುನಗರಿ ಸಂಗೀತ ಪಯಣ ಲೂಧಿಯಾನದಲ್ಲಿ ಆರಂಭವಾಗಿದ್ದು, ಗೋವಾ, ಫರೀದಾಬಾದ್, ಪುಣೆ, ಇಂದೋರ್, ನಾಗ್ಪುರ, ಕೋಲ್ಕೊತ್ತಾಗಳಲ್ಲಿ ಅದ್ಭುತ ಯಶಸ್ಸು ಸಾಧಿಸಿ ಇದೀಗ ಹೊಸ ಸಂಚಲನ ಮೂಡಿಸಲು ಬೆಂಗಳೂರಿಗೆ ಆಗಮಿಸಿದೆ. ಇಂಪೀರಿಯಲ್ ಬ್ಲೂ ಸೂಪರ್‍ಹಿಟ್ ನೈಟ್ಸ್ ಅನ್ನು ಜೀವನವನ್ನು ಪ್ರೀತಿಸುವ ಯುವಜನರಿಗೆ ಸಂಪೂರ್ಣ ಮನರಂಜನೆ ನೀಡಲೆಂದೇ ರೂಪಿಸಲಾಗಿದೆ.

ತಮ್ಮ ವಿಶಿಷ್ಟ ಧ್ವನಿ ಮೂಲಕವೇ ವೇದಿಕೆಯಲ್ಲೊಂದು ಅದ್ಭುತ ವಾತಾವರಣ ನಿರ್ಮಿಸುವ ಪ್ರತಿಷ್ಠಿತ ಪ್ರಶಸ್ತಿಗಳ ವಿಜೇತ ಸುಖವಿಂದರ್ ಸಿಂಗ್ ಅವರಿಗೆ ಪ್ರತಿಭಾವಂತ ಸಂಗೀತಗಾರರ ತಂಡ ಸಾಥ್ ನೀಡಲಿದೆ. `ಛಯ್ಯಾ ಛಯ್ಯಾ', `ದಬಾಂಗ್', `ಜೈ ಹೋ' ಸೇರಿದಂತೆ ತಮ್ಮ ಕೆಲವು ಅತ್ಯುತ್ತಮ ಹಾಡುಗಳನ್ನು ಸಿಂಗ್ ಅವರು ಪ್ರಸ್ತುತಪಡಿಸಲಿದ್ದಾರೆ. ಆ ಮೂಲಕ ಗ್ರಾಂಡ್ ಶೋ ಕೊನೆಯಲ್ಲಿ ಅಭಿಮಾನಿಗಳಿಗೆ ಸಂತಸದ ಅನುಭವ ಉಣಬಡಿಸಲಿದ್ದಾರೆ.

ಶ್ರೀ ರಾಜಾ ಬ್ಯಾನರ್ಜಿ, ಸಹಾಯಕ ಉಪ ಅಧ್ಯಕ್ಷ, ಮಾರುಕಟ್ಟೆ ವಿಭಾಗ, ಪೆರ್ನಾಡ್ ರೈಕಾರ್ಡ್ ಇಂಡಿಯಾ ಅವರು ಹೇಳುತ್ತಾರೆ, ` ಇಂಪೀರಿಯಲ್ ಬ್ಲೂ ಸೂಪರ್‍ಹಿಟ್ ನೈಟ್ಸ್ ಎರಡನೇ ಋತುವಿನ ಬಗ್ಗೆ ನಾವು ಬಹಳ ಥ್ರಿಲ್ ಆಗಿದ್ದೇವೆ. ಇದು ಈಗ ಮನರಂಜನಾ ಉದ್ಯಮದಲ್ಲಿನ ಅತ್ಯುತ್ತಮ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ವೇದಿಕೆಯೂ ಆಗಿದೆ'

ಕಾರ್ಯಕ್ರಮದ ಬಗ್ಗೆ ಅತ್ಯುತ್ಸಾಹ ತೋರಿಸಿರುವ ಶ್ರೀ ಸುಖವಿಂದರ್ ಸಿಂಗ್ ಅವರು, `ಬೆಂಗಳೂರಿನಲ್ಲಿ ಕಾರ್ಯಕ್ರಮ ನೀಡಲು ಉತ್ಸುಕನಾಗಿದ್ದೇನೆ. ಬೆಂಗಳೂರಿನಲ್ಲಿ ಭಾರಿ ಸಂಖ್ಯೆಯ ಸಂಗೀತಪ್ರೇಮಿಗಳು ಸೇರುತ್ತಾರೆ ಮತ್ತು ಇಂಪೀರಿಯಲ್ ಬ್ಲೂ ಸೂಪರ್‍ಹಿಟ್ ನೈಟ್ಸ್ ಇಲ್ಲಿರುವ ನನ್ನ ಅಭಿಮಾನಿಗಳನ್ನು ¨ರಂಜಿಸುವ ಮತ್ತೊಂದು ಅವಕಾಶ ನೀಡಿದೆ. ಇಂಪೀರಿಯಲ್ ಬ್ಲೂ ಸೂಪರ್‍ಹಿಟ್ ನೈಟ್ಸ್ ವೇದಿಕೆಯಲ್ಲಿ ಖುಷಿಯನ್ನು ಆಸ್ವಾದಿಸುತ್ತಾ ಹಾಡುತ್ತೇನೆ. ಈ ಸಂಗೀತ ಪಯಣ ಮುಂದುವರಿದಂತೆ ನನ್ನ ಅಭಿಮಾನಿಗಳಿಗೆ ಇನ್ನಷ್ಟು ಉತ್ಸಾಹ ಮತ್ತು ಮನರಂಜನೆ ನೀಡಲು ಬಯಸುತ್ತೇನೆ'.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT