ಕಿಮ್ಮನೆ ರತ್ನಾಕರ್ 
ಜಿಲ್ಲಾ ಸುದ್ದಿ

ಮಕ್ಕಳಿಗೆ ಇರುವಷ್ಟು ಜ್ಞಾನ ಶಿಕ್ಷಕರಿಗೆ ಇಲ್ಲ: ಸಚಿವ ಕಿಮ್ಮನೆ ರತ್ನಾಕರ್

ಬ್ರೈಲ್ ಸ್ಲೇಟ್ ಬಳಸಿ ವ್ಯಾಸಂಗ ಮಾಡುತ್ತಿದ್ದ ಅಂಧ ಮಕ್ಕಳಿಗೆ ಶುಭೋದಯ ಚಾರಿಟೇಬಲ್ ಟ್ರಸ್ಟ್ ಆಡಿಯೋ ಸಿಡಿ ಮಾಡಿ ಸಾವಿರಾರು ವಿದ್ಯಾರ್ಥಿಗಳಿಗೆ ಬೆಳಕಾಗಿದ್ದು ಇತಿಹಾಸ.

ಬೆಂಗಳೂರು: ಬ್ರೈಲ್ ಸ್ಲೇಟ್ ಬಳಸಿ ವ್ಯಾಸಂಗ ಮಾಡುತ್ತಿದ್ದ ಅಂಧ ಮಕ್ಕಳಿಗೆ ಶುಭೋದಯ ಚಾರಿಟೇಬಲ್ ಟ್ರಸ್ಟ್ ಆಡಿಯೋ ಸಿಡಿ ಮಾಡಿ ಸಾವಿರಾರು ವಿದ್ಯಾರ್ಥಿಗಳಿಗೆ ಬೆಳಕಾಗಿದ್ದು ಇತಿಹಾಸ. ಈಗ ಖುದ್ದು ಎಂ.ಟಿ. ಎಜುಕೇರ್ ಚಾರಿಟೇಬಲ್ ಟ್ರಸ್ಟ್ ವೀಡಿಯೋ ರೆಕಾರ್ಡ್‍ವುಳ್ಳ `ರೋಬೋಮೇಟ್ ಪ್ಲಸ್' ಎಂಬ ಆ್ಯಪ್ ಬಿಡುಗಡೆ ಮಾಡಿ ಮಾಧ್ಯಮಿಕ ಮತ್ತು ಪಿಯು ವಿದ್ಯಾರ್ಥಿಗಳಿಗೆ ಸುವರ್ಣ ಬಾಗಿಲು ತೆರೆದುಕೊಟ್ಟಿದೆ.
ನಗರದ ನೃಪತುಂಗ ರಸ್ತೆಯಲ್ಲಿರುವವರ ಶಿಕ್ಷಣ ಅಭಿಯಾನ  ಯೋಜನಾ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಆ್ಯಪ್ ಅನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಶನಿವಾರ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳ ವಿದ್ಯಾಭ್ಯಾಸ ದೃಷ್ಟಿಯಿಂದ ಖಾಸಗಿ ಸಂಸ್ಥೆಯೊಂದು  ಈ ಆ್ಯಪ್ ತಯಾರಿಸಿಕೊಟ್ಟಿರುವುದು ಅನುಕೂಲವಾಗುವಂತದ್ದು. ಬಹುತೇಕ ಶಿಕ್ಷಕರಿಗೆ ಮಕ್ಕಳಿಗಿರುವಷ್ಟು ಜ್ಞಾನ ಇರುವುದಿಲ್ಲ ಕೆಲವು ಕಡೆ ಮೇಲ್ವಿಚಾರಣೆಗೆ ಹೋದಾಗ ಗೊತ್ತಾಗಿದೆ. ಅವರೇ ಮಕ್ಕಳಿಗೆ ಅರೆ ಬರೆ ಬೋಧಿಸಿದರೆ ಗುಣಮಟ್ಟದ ಶಿಕ್ಷಣ ಕನಸಾಗಿಯೇ ಉಳಿಯುತ್ತದೆ. ಈ ನಿಟ್ಟಿನಲ್ಲಿ ಆ್ಯಪ್ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಎಂ.ಟಿ. ಎಜುಕೇರ್ ಚಾರಿಟೇಬಲ್ ಟ್ರಸ್ಟ್‍ನ ಟ್ರಸ್ಟಿ ಸುಜಿತ್ ಕುಮಾರ್ ಮಾತನಾಡಿ, ನಮ್ಮ ಸಂಸ್ಥೆಯು 33 ವರ್ಷಗಳಿಂದ ಇಂತಹ ಕೆಲಸಗಳಲ್ಲಿ ತೊಡಗಿಸಿಕೊಂಡು ಬಂದಿದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಪೂರಕವಾಗಿ ರೂಪಿಸಬೇಕು  ಎಂಬ ಇರಾದೆಯಿಂದ ಈ ಆ್ಯಪ್ ತಯಾರಿಸಿದ್ದೇವೆ. ಸದ್ಯ ಇಂಗ್ಲಿಷ್‍ನಲ್ಲಿ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಕನ್ನಡದಲ್ಲೇ ಸೇವೆ ನೀಡಲು ಪ್ರಯತ್ನಿಸಲಾಗುವುದು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಎಸ್. ರಮೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT