ಕಳಸಾ ಬಂಡುರಿಗೆ ಟೆಕ್ಕಿಗಳ ಸಾಥ್ 
ಜಿಲ್ಲಾ ಸುದ್ದಿ

ಕಳಸಾ ಬಂಡುರಿಗೆ ಟೆಕ್ಕಿಗಳ ಸಾಥ್

ಕಳಸಾಡೂರಿ ಕುಡಿಯುವ ನೀರಿನ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಐಟಿ ಬಿಟಿ ಕ್ಷೇತ್ರದ ಟೆಕ್ಕಿಗಳು ಪ್ರತಿಭಟನೆ ನಡೆಸಿದರು.

ಬೆಂಗಳೂರು: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಐಟಿ ಬಿಟಿ ಕ್ಷೇತ್ರದ ಟೆಕ್ಕಿಗಳು ಪ್ರತಿಭಟನೆ ನಡೆಸಿದರು.
ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆದ ಪ್ರತಿಭಟನೆ ಯಲ್ಲಿ 30ಕ್ಕೂ ಹೆಚ್ಚು ಮಂದಿ ಭಾಗವಹಿಸಿ ರೈತರಿಗೆ ಬೆಂಬಲ ಸೂಚಿಸಿದರು. ಮಹಾದಾಯಿ ಯೋಜನೆ ಜಾರಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಕೇವಲ ಮತಬ್ಯಾಂಕಿಗಾಗಿ ಅಲ್ಲಿನ ಜನರನ್ನು ಬಳಸಿಕೊಳ್ಳುತ್ತಿವೆಯೇ ಹೊರತು ಜನರ ಸಂಕಷ್ಟಗಳಿಗೆ ಪರಿಹರಿಸುತ್ತಿಲ್ಲ. ಈ ಕೂಡಲೇ ಪ್ರಧಾನಮಂತ್ರಿಗಳು ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ಮಾತುಕತೆ ನಡೆಸಬೇಕೆಂದು ಆಗ್ರಹಿಸಿದರು.
ಇದೇ ವೇಳೆ ಮನವಿ ಸ್ವೀಕರಿಸಲು ಸ್ಥಳಕ್ಕೆ ಆಗಮಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಅವರು ಪ್ರಧಾನಿ ಮೇಲೆ ಒತ್ತಡ ತಂದರೆ ಕೆಲಸ ಆಗಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಟೆಕ್ಕಿಗಳು, ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹಾಕುವ ಕೆಲಸವನ್ನು ನಾವು ಮಾಡುತ್ತೇವೆ. ರಾಜ್ಯ ಸರ್ಕಾರದಿಂದ ಆಗಬೇಕಾದ ಕೆಲಸವನ್ನು ತಮ್ಮ ಮುಖಂಡತ್ವದಲ್ಲೇ ನಡೆಸಬೇಕೆಂದು ಕೋರಿದರು.
ಬಸವ ಮಂಟಪದ ಜಗದ್ಗುರು ಬಸವಕುಮಾರ ಸ್ವಾಮೀಜಿ, ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ, ಡಾ. ಚಂದ್ರಶೇಖರ ಕಂಬಾರ, ಟೆಕ್ಕಿಗಳಾದ ಶ್ರೀಕಾಂತ್, ಶಿವಾನಂದ, ಗುರುರಾಜ್, ಪುಟ್ಟಹೊನ್ನೇಗೌಡಸ, ಪ್ರಕಾಶ್ ನಲವಾಡಿ, ಮಾದವ್ ರೆಡ್ಡೇರ್, ಸಂತೋಷ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT