ಚಾಮರಾಜಪೇಟೆಯಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇಗುಲದ ಮುಂದೆ ದರ್ಶನಕ್ಕಾಗಿ ಸಾಲುಗಟ್ಟಿರುವ ಭಕ್ತಾದಿಗಳು... 
ಜಿಲ್ಲಾ ಸುದ್ದಿ

ಏಕಾದಶಿ: ದೇಗುಲಗಳಲ್ಲಿ ವಿಶೇಷ ಪೂಜೆ, ವೈಕುಂಠ ವಾಸನ ದರ್ಶನಕ್ಕೆ ಸಾಲುಗಟ್ಟಿದ ಜನ

ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರಿನಲ್ಲಿ ಹಲವಾರು ವಿಷ್ಣು ದೇಗುಲದಲ್ಲಿ ವಿಶೇಷ ಪೂಜೆ...

ಬೆಂಗಳೂರು: ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರಿನಲ್ಲಿ ಹಲವಾರು ವಿಷ್ಣು ದೇಗುಲದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.
ಚಾಮರಾಜಪೇಟೆಯಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ಮಧ್ಯಾರಾತ್ರಿಯಿಂದಲೇ ವಿಶೇಷ ಪೂಜೆ ಹಾಗೂ ಅಭಿಷೇಕಗಳು ನಡೆಯುತ್ತಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. 
ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಲಕ್ಷ್ಮೀ ನರಸಿಂಹನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ವಿಶೇಷ ನೈವೇದ್ಯ ನೆರವೇರಿಸಲಾಗಿದೆ.
ಏಕಾದಶಿಗಳಲ್ಲೇ ಅತ್ಯಂತ ಶ್ರೇಷ್ಠವಾದ ಏಕಾದಶಿ ವೈಕುಂಠ ಏಕಾದಶಿ. ಧನುರ್ಮಾಸದ ಶುಕ್ಲಪಕ್ಷದಂದು ಶ್ರೀ ವಿಷ್ಣುವಿನ ವಾಸ ಸ್ಥಾನ ವೈಕುಂಠ ದ್ವಾರ ತೆರೆಯುವ ದಿನವಾದ್ದರಿಂದ ಈ ಏಕಾದಶಿ ಶ್ರೇಷ್ಠ ದಿನ ಎಂಬ ನಂಬಿಕೆ ಇದೆ.
ಇದನ್ನು ಮೋಕ್ಷದ ಏಕಾದಶಿಯಂದಲೂ ಕರೆಯಲಾಗುತ್ತದೆ. ಬೆಂಗಳೂರಿನಲ್ಲಿರುವ ಅನೇಕ ವಿಷ್ಣು ದೇವಾಲಯದಲ್ಲಿ ಶ್ರೀನಿವಾಸನಿಗೆ ವಿಶೇಷ ಪೂಜೆಗಳು ಸಲ್ಲಿಸಲಾಗುತ್ತಿದ್ದು, ವೈಕುಂಠ ವಾಸನ ದರ್ಶನ ಪಡೆಯುವ ಸುಲುವಾಗಿ ಸಾಲು ಸಾಲು ಜನ ಮಧ್ಯರಾತ್ರಿಯಿಂದಲೇ ಕಾಯುತ್ತಿದ್ದಾರೆ. 
ಏಕಾದಶಿಯಂದು ದರ್ಶನ ಪಡೆಯುವ ಮೂಲಕ ಮುಕ್ತಿ ಮಾರ್ಗ ಅನುಸರಿಸುವ ನಿಟ್ಟಿನಲ್ಲಿ ಜನರು ದರ್ಶನಕ್ಕಾಗಿ ಕಾಯುತ್ತಿದ್ದಾರೆ. ಇದು ಎಲ್ಲಾ ವಿಷ್ಣು ದೇಗುಲದ ಮುಂದೆ ಕಂಡುಬರುತ್ತಿದೆ. ವಿಷ್ಣು ದರ್ಶನ ಪಡೆಯುವ ಭಕ್ತರಿಗೆ ಲಾಡುಗಳನ್ನು ವಿತರಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT