ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಲಾರಿ ಡಿಕ್ಕಿ: ಮಹಿಳೆ ಸಾವು ಯುವತಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಕೆಐಎಡಿಬಿ ಮುಖ್ಯರಸ್ತೆಯ ಬಿ.ಕೆ.ಪಾಳ್ಯ ಗೇಟ್ ಬಳಿ ಸ್ಕೂಟಿಗೆ ಮರಳು ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟು, ಯುವತಿ ಗಂಭೀರವಾಗಿ ಗಾಯಗೊಂಡಿರುವ ....

ಬೆಂಗಳೂರು: ಕೆಐಎಡಿಬಿ ಮುಖ್ಯರಸ್ತೆಯ ಬಿ.ಕೆ.ಪಾಳ್ಯ ಗೇಟ್ ಬಳಿ ಸ್ಕೂಟಿಗೆ ಮರಳು ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟು, ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಹುಣಸೂರು ನಿವಾಸಿ ಜಯಂತಿ (38) ಮೃತಪಟ್ಟವರು. ಇವರ ಪುತ್ರಿ ಲಾವಣ್ಯ (18) ಗಂಭೀರವಾಗಿ ಗಾಯಗೊಂಡವರು.

ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಜಯಂತಿ, ಬೆಳಗ್ಗೆ 9.30ರ ಸುಮಾರಿಗೆ ಮಗಳು ಲಾವಣ್ಯ ಅವರನ್ನು ಸ್ಕೂಟಿಯಲ್ಲಿ ಕೂರಿಸಿಕೊಂಡು ಕೆಐಎಡಿಬಿ ಮುಖ್ಯರಸ್ತೆಯಲ್ಲಿ ಬರುತ್ತಿದ್ದರು. ಈ ವೇಳೆ ಕೆ.ಬಿ.ಪಾಳ್ಯದ ಗೇಟ್‍ನಲ್ಲಿ ಹಿಂದಿನಿಂದ ಬಂದ ಮರಳು ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಇದರಿಂದ ಜಯಂತಿ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು, ಮೂಗು ಮತ್ತು ಕಿವಿಯಲ್ಲಿ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಯುವತಿ ಲಾವಣ್ಯ ಅವರನ್ನು ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದ ಗಾಬರಿಗೊಂಡಿರುವ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದೇನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT