ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಲೋಕಸಭಾ ಕಲಾಪ ಹದಗೆಡಲು ಪ್ರಧಾನಿಯೇ ಕಾರಣ:ಮೊಯ್ಲಿ

ಲೋಕಸಭಾ ಕಲಾಪಗಳು ವಿಫಲವಾಗಲು ಪ್ರಧಾನಿ ನರೇಂದ್ರ ಮೋದಿ ಅವರೇ ನೇರ ಕಾರಣ ಎಂದು ಸಂಸದ ಎಂ. ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರ: ಲೋಕಸಭಾ ಕಲಾಪಗಳು ವಿಫಲವಾಗಲು ಪ್ರಧಾನಿ ನರೇಂದ್ರ ಮೋದಿ ಅವರೇ ನೇರ ಕಾರಣ ಎಂದು ಸಂಸದ ಎಂ. ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರಿಗೆ ಉತ್ತರಿಸಿದ ಅವರು, ಪ್ರಧಾನಿಯಾಗಿ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ಸೌಜನ್ಯಕ್ಕಾದರೂ ಒಮ್ಮೆಯೂ ವಿರೋಧ ಪಕ್ಷಗಳ ಮುಖಂಡರ ಸಭೆ ಕರೆದಿಲ್ಲ ಎಂದು ಕಿಡಿಕಾರಿದರು. ಪ್ರತಿಕ್ಷದ ಮುಖಂಡರ ಜತೆ ಚರ್ಚೆ ನಡೆಸಿ ಜನಪರ ಬಿಲ್‍ಗಳು ಪಾಸ್ ಮಾಡಲು ಸಹಕಾರ ಕೋರುವಲ್ಲಿಯೂ ಪ್ರಧಾನಿ ವಿಫಲರಾಗಿದ್ದು, ವಿರೋಧ ಪಕ್ಷಗಳ ಜತೆ ಸಮನ್ವಯತೆ ಕಾಯ್ದುಕೊಳ್ಳುವ ಬದಲು ಅಂತರ ಕಾಪಾಡಿಕೊಳ್ಳುತ್ತಿರುವ ಕಾರಣ ಕಲಾಪಗಳು ಸುಗುಮವಾಗಿ ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದರು.
ತಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಆದರೆ, ಅವರ ಪಕ್ಷದ ಬಿಜೆಪಿ ಸಂಸದ ಕೀರ್ತಿ ಆಜಾದ್ ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ದಕ್ಕೆ ಅಮಾನತು ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಕೋಲಾರ ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಪರ ಉಭಯ ಜಿಲ್ಲೆಗಳ ಎಲ್ಲ ಕಾಂಗ್ರೆಸ್ ಮುಖಂಡರೂ ಒಗ್ಗಟ್ಟಿನಿಂದ ಶ್ರಮಿಸಲಿದ್ದು, ಯಲುವಹಳ್ಳಿ ರಮೇಶ್ ಕೂಡಾ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಒತ್ತಿ ಹೇಳಿದರು. ಕಾಂಗ್ರೆಸ್ ಜನಪರ ಕಾರ್ಯಕ್ರಮಗಳ ಕುರಿತು ಚುನಾಯಿತ ಪ್ರತಿನಿಧಿಗಳಿಗೆ ಅರಿವಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್
ಜಯಭೇರಿ ಭಾರಿಸಲಿದೆ ಎಂದು ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT