(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮತ ಚಲಾವಣೆಗೆ ದಿನವಷ್ಟೇ ಬಾಕಿ

ವಿಧಾನ ಪರಿಷತ್ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಮತದಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ಈಗ ಅಭ್ಯರ್ಥಿಗಳ ಒಳ ಪ್ರಚಾರ ಶುರುವಾಗಿದೆ. ಇಷ್ಟೂ ದಿನ ಪಕ್ಷದ ನಾಯಕರು ಹಾಗೂ ಸ್ಥಳೀಯ ಶಾಸಕರು ಅಲ್ಲಲ್ಲಿ ವೇದಿಕೆ ರೂಪಿಸಿ ನಡೆಸುತ್ತಿದ್ದ...

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಮತದಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ಈಗ ಅಭ್ಯರ್ಥಿಗಳ ಒಳ ಪ್ರಚಾರ ಶುರುವಾಗಿದೆ. ಇಷ್ಟೂ ದಿನ ಪಕ್ಷದ ನಾಯಕರು ಹಾಗೂ ಸ್ಥಳೀಯ ಶಾಸಕರು ಅಲ್ಲಲ್ಲಿ ವೇದಿಕೆ ರೂಪಿಸಿ ನಡೆಸುತ್ತಿದ್ದ ಪ್ರಚಾರಕ್ಕೆ ತೆರೆ ಬಿದ್ದಿದೆ.

ಹಾಗೆಯೇ ಪಕ್ಷಗಳ ನಾಯಕರಾದ ಸಿದ್ದರಾಮ ಯ್ಯ, ಡಾ.ಜಿ.ಪರಮೇಶ್ವರ್, ಎಚ್.ಡಿ. ಕುಮಾರಸ್ವಾಮಿ ಮತ್ತು ಬಿ.ಎಸ್. ಯಡಿ ಯೂರಪ್ಪ, ಈಶ್ವರಪ್ಪ, ಪ್ರಹ್ಲಾದ್ ಜೋಶಿ ಅವರು ಪ್ರವಾಸ ಮತ್ತು ಪ್ರಚಾರಗಳನ್ನೂ ಮುಗಿಸಿದ್ದಾರೆ. ಇವರು ಮತ ಕ್ಷೇತ್ರಗಳಿಂದಲೂ ಹೊರ ಹೋಗಿದ್ದಾರೆ. ಹೀಗಾಗಿ ಸದ್ಯ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಮಾತ್ರ ಉಳಿದಿದ್ದು, ಅವರೇ ತೆರೆ ಮರೆ ಪ್ರಚಾರ ಆರಂಭಿಸಿದ್ದಾರೆ. ಮತದಾನಕ್ಕೆ ಇನ್ನೂ ಕೆಲವೇ ಗಂಟೆಗಳು ಉಳಿದಿರುವುದರಿಂದ ಅಭ್ಯರ್ಥಿ ಗಳು ಮತದಾರರನ್ನು ಸೆಳೆಯಲು ಕೊನೆ ಕ್ಷಣದ ಕಾಂಚಾಣ ಕಸರತ್ತು ಶುರು ಮಾಡಿದ್ದಾರೆ ಎಂದು ಪಕ್ಷದ ಕಾರ್ಯಕರ್ತರೇ ಹೇಳಿದ್ದಾರೆ.

ರಾಜ್ಯದ ಒಟ್ಟು 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆಯುವ ಚುನಾವಣೆ ಕಣದಲ್ಲಿ ಎಲ್ಲಾ ಪಕ್ಷಗಳು ಮತ್ತು ಸ್ವತಂತ್ರರೂ ಸೇರಿದಂತೆ 125 ಮಂದಿ ಅಭ್ಯರ್ಥಿಗಳಿದ್ದಾರೆ. ಡಿ.27ರ ಬೆಳಗ್ಗೆ 8ರಿಂದ ಸಂಜೆ 4ಗಂಟೆವರೆಗೂ ಮತದಾನ ನಡೆಯಲಿದ್ದು, ಇದಕ್ಕಾಗಿ ಆಯೋಗ ಎಲ್ಲಾ ರೀತಿಯ ಸಿದಟಛಿತೆಯನ್ನೂ ನಡೆಸಿದೆ. ಪ್ರತಿ 8 ಮತದಾರರಿಂದ 35 ಮತದಾರರಿಗೆ ಒಂದರಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿ ಒಟ್ಟು 6314 ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಅವುಗಳಿಗೆ ತಲಾ 4ಮಂದಿಯಂತೆ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಒಟ್ಟು 1,07,123  ತದಾರರು ಮತದಾನ ಮಾಡಲಿದ್ದು, ಇವರನ್ನು ಮನವೊಲಿಸಲು ಅಭ್ಯರ್ಥಿಗಳು ಫೋನ್ ಮೊರೆ ಹೋಗುತ್ತಿದ್ದಾರೆ.

ಕಳೆದ 12 ದಿನಗಳಿಂದ ಪಕ್ಷದ ವೇದಿಕೆಗಳಿಗೆ ಕರೆದು ನಾಯಕರ ಮೂಲಕ ಮತಯಾಚಿಸುತ್ತಿದ್ದ ಅಭ್ಯರ್ಥಿಗಳು ಅಂತಿಮವಾಗಿ ತಾವೇ ರಂಗಕ್ಕಿಳಿದು ತೆರೆಮರೆ ಪ್ರಚಾರ ಮಾಡುತ್ತಿದ್ದಾರೆ. ಮೂರು ಪಕ್ಷಗಳ ಅಭ್ಯರ್ಥಿಗಳು ಸ್ಥಳೀಯ ನಾಯಕರ ಮೂಲಕ ಮತದಾರರ ಕೈ ಬೆಚ್ಚಗೆ ಮಾಡಿದ್ದಾರೆ. ಈಗ ಕೈ ತಪ್ಪುವ ಮತಗಳನ್ನು ಸೆಳೆಯಲು ಪೈಪೊೀಟಿಗೆ ಬಿದ್ದು ಕೈ ಬಿಸಿ ಮಾಡುತ್ತಿದ್ದಾರೆ. ಆದರೆ ಅಭ್ಯರ್ಥಿ ಗಳಿಗೆ ಚುನಾವಣಾ ವೆಚ್ಚ ಅನ್ವಯವಾಗದ ಕಾರಣ ಚುನಾವಣಾ ಆಯೋಗ ಏನೂ ಮಾಡಲಾಗದ ಸ್ಥಿತಿಯಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ