ಕೃಷಿ ಸಚಿವ ಕೃಷ್ಣಭೈರೇಗೌಡ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕೇಂದ್ರದ ಪರಿಹಾರ ಬಂದಿಲ್ಲ: ಕೃಷಿ ಸಚಿವ

ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ ರಾಜ್ಯಗಳ ಪೈಕಿ ಕರ್ನಾಟಕವೇ ಮೊದಲು, ಆದರೆ, ಕೇಂದ್ರ ಸರ್ಕಾರ ನಾವು ಕೇಳಿದಷ್ಟು ಅನುದಾನವನ್ನು ನೀಡಿಲ್ಲ ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು...

ಬೆಂಗಳೂರು: ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ ರಾಜ್ಯಗಳ ಪೈಕಿ ಕರ್ನಾಟಕವೇ ಮೊದಲು, ಆದರೆ, ಕೇಂದ್ರ ಸರ್ಕಾರ ನಾವು ಕೇಳಿದಷ್ಟು ಅನುದಾನವನ್ನು ನೀಡಿಲ್ಲ ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಬರ ಪರಿಹಾರ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದಿಂದ ಯಾವುದೇ ತಪ್ಪು ಆಗಿಲ್ಲ. ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರವು ನವೆಂಬರ್ ನಲ್ಲಿ ಹಾಗೂ ರಾಜಸ್ಥಾನ ಡಿಸೆಂಬರ್ ನಲ್ಲಿ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿದೆ. ಕರ್ನಾಟಕ ಸರ್ಕಾರವು ಕಳೆದ ಆಗಸ್ಟ್ ನಲ್ಲೇ ಮನವಿ ಮಾಡಿದ್ದರೂ ಈ ವರೆಗೆ ಅನುದಾನ ಬಂದಿಲ್ಲ. ಸಿಎಂ ಹಾಗೂ ತಾವು ಹತ್ತಾರು ಬಾರಿ ಮನವಿ ಮಾಡಿದ್ದೇವೆ. ರಾಜ್ಯದ ಕೇಂದ್ರ ಸಚಿವರಾದ ಸದಾನಂದ ಗೌಡ, ಅನಂತ ಕುಮಾರ್, ವೆಂಕಯ್ಯ ನಾಯ್ಡು ಅವರಲ್ಲೂ ಪ್ರಸ್ಥಾಪಿಸಲಾಗಿದೆ.

ರಾಜ್ಯಕ್ಕೆ ಬಂದ ಕೇಂದ್ರ ತಂಡವು ಅಧ್ಯಯನ ನಡೆಸಿ ರು.2270 ಕೋಟಿ ಪರಿಹಾರ ನೀಡುವಂತೆ ವರದಿ ನೀಡಿತು. ರಾಜ್ಯ ಸರ್ಕಾರ ಈ ವರದಿ ಆಧರಿಸಿ ಒಟ್ಟು ರು.3850 ಕೋಟಿ ಪರಿಹಾರ ನೀಡುವಂತೆ ಮನವಿ ಸಲ್ಲಿಸಿತು. ಆದರೆ ಕೇಂದ್ರ ಸರ್ಕಾರ ರು. 2270 ಕೋಟಿ ಬದಲು ಪರಿಹಾರದ ಮೊತ್ತವನ್ನು ರು.1540 ಕೋಟಿಗೆ ಇಳಿಸಿತು. ಇಷ್ಟಾದರೂ ಹಣ ಬಿಡುಗಡೆಯಾಗಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT