(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

110 ಹಳ್ಳಿಗಳಿಗೆ ಹರಿಯುತ್ತೆ ಉಳಿತಾಯವಾಗುವ ನೀರು

ನಗರದಲ್ಲಿ ಸೋರಿಕೆಯಾಗುತ್ತಿದ್ದ ಕುಡಿಯುವ ನೀರಿನ ಮಟ್ಟವನ್ನು ತಗ್ಗಿಸಲಾಗಿದ್ದು, ಈ ಕ್ರಮದಿಂದ ಉಳಿತಾಯವಾದ ನೀರನ್ನು ಬೆಂಗಳೂರು ಗ್ರಾಮಾಂತರದ 110 ಹಳ್ಳಿಗಳಿಗೆ ಪೂರೈಸಲು ಬೆಂಗಳೂರು ಜಲ ಮಂಡಳಿ ನಿರ್ಧರಿಸಿದೆ...

ಬೆಂಗಳೂರು: ನಗರದಲ್ಲಿ ಸೋರಿಕೆಯಾಗುತ್ತಿದ್ದ ಕುಡಿಯುವ ನೀರಿನ ಮಟ್ಟವನ್ನು ತಗ್ಗಿಸಲಾಗಿದ್ದು, ಈ ಕ್ರಮದಿಂದ ಉಳಿತಾಯವಾದ ನೀರನ್ನು ಬೆಂಗಳೂರು ಗ್ರಾಮಾಂತರದ 110 ಹಳ್ಳಿಗಳಿಗೆ ಪೂರೈಸಲು ಬೆಂಗಳೂರು ಜಲ ಮಂಡಳಿ ನಿರ್ಧರಿಸಿದೆ.

ಜಲಮಂಡಳಿಯ ಅಧ್ಯಕ್ಷರಾದ ಟಿ.ಎಂ. ವಿಜಯ್ ಭಾಸ್ಕರ್ ಅಧಿಕಾರ ವಹಿಸಿಕೊಂಡ ಬಳಿಕ ನೀರಿನ ಸೋರಿಕೆ, ಅನಧಿಕೃತ ಸಂಪರ್ಕ, ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣವನ್ನು ಇಳಿಸಲು ಪ್ರಯತ್ನಿಸಿದ್ದಾರೆ. ಇದರಿಂದ ಪ್ರತಿನಿತ್ಯ ನಗರಕ್ಕೆ 135 ಕೋಟಿ ಲೀಟರ್ ಕಾವೇರಿ ನೀರು ಪೂರೈಕೆಯಾಗುತ್ತಿದ್ದು, ಅದರಲ್ಲಿ  ಶೇ.48 ರಷ್ಟು ನೀರು ಲೆಕ್ಕಕ್ಕೆ ಸಿಗುತ್ತಿರಲಿಲ್ಲ. ಈ ಪ್ರಮಾದವನ್ನು ಪತ್ತೆ ಹಚ್ಚಿ, ಬಂದ್ ಮಾಡುವಲ್ಲಿ ಜಲಮಂಡಳಿಯ ಆಡಳಿತ ವರ್ಗ ಸಫಲವಾಗಿದೆ. ಸದ್ಯದ ಫಲಿತಾಂಶದಂತೆ ಶೇ.48 ರಿಂದ 43ಕ್ಕೆ ಇಳಿದಿದೆ.

ಜನವರಿಯೊಳಗೆ ಶೇ.30ಕ್ಕೆ ಇಳಿಸಲೂ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯ ಎಂಜಿನಿಯರ್ ಎಸ್.ಕೃಷ್ಣಪ್ಪ ತಿಳಿಸಿದ್ದಾರೆ. ಈ 110 ಹಳ್ಳಿಗಳಿಗೆ ನೀರು ಒದಗಿಸುವ ಯೋಜನೆಗೆ ರು. 5,018 ಕೋಟಿ ವೆಚ್ಚವಾಗಲಿದ್ದು, ಈ ಸಾಲಕ್ಕಾಗಿ ಜಪಾನ್ ಅಂತಾರಾಷ್ಟ್ರೀ ಯ ಸಹಕಾರ ಸಂಸ್ಥೆಗೆ (ಜೈಕಾ) ಪ್ರಸ್ತಾವ ಸಲ್ಲಿಸಲಾಗಿದೆ. ಅಲ್ಲಿಯವರೆಗೆ ಸೋರಿಕೆಯಾಗುತ್ತಿದ್ದ ನೀರನ್ನೇ ಉಳಿಸಿ ಇತರೆಡೆ ಹಂಚಲು ತೀರ್ಮಾನಿಸಲಾಗಿದೆ. ಈ ಹಳ್ಳಿಗಳಲ್ಲಿ ಸಾವಿರ ಅಡಿ ಕೊರೆದರೂ ನೀರು ಸಿಗುತ್ತಿಲ್ಲ. ಇಲ್ಲಿ ನೀರಿನ ಸಮಸ್ಯೆ ಗಂಭೀರವಾಗಿರುವುದರಿಂದ ಜಲಮಂಡಳಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT