(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಚರ್ಚ್ ಸ್ಟ್ರೀಟ್ ಸ್ಪೋಟಕ್ಕೆ ವರ್ಷ

ಕಳೆದ 2014ರ ಡಿ.28ರಂದು ಸಂಭವಿಸಿದ ಬೆಂಗಳೂರಿನ ಚರ್ಚ್‍ಸ್ಟ್ರೀಟ್ ಸ್ಪೋಟಕ್ಕೆ ಸೋಮವಾರ ಒಂದು ವರ್ಷ ಕಳೆದಿದೆ. ಈ ಸ್ಪೋಟದಲ್ಲಿ ಮೃತಪಟ್ಟ ತಮಿಳುನಾಡು ಮೂಲದ ಭವಾನಿ ಅವರಿಗೆ ಕುಟುಂಬ ಸದಸ್ಯರು...

ಬೆಂಗಳೂರು: ಕಳೆದ 2014ರ ಡಿ.28ರಂದು ಸಂಭವಿಸಿದ ಬೆಂಗಳೂರಿನ ಚರ್ಚ್‍ಸ್ಟ್ರೀಟ್ ಸ್ಪೋಟಕ್ಕೆ ಸೋಮವಾರ ಒಂದು ವರ್ಷ ಕಳೆದಿದೆ. ಈ ಸ್ಪೋಟದಲ್ಲಿ ಮೃತಪಟ್ಟ ತಮಿಳುನಾಡು ಮೂಲದ ಭವಾನಿ ಅವರಿಗೆ ಕುಟುಂಬ ಸದಸ್ಯರು ಘಟನೆ ನಡೆದ ಸ್ಥಳದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ಮೃತ ಭವಾನಿ ಅವರ ಪತಿ ಬಾಲನ್, ಸಹೋದರ ರಮೇಶ್ ಅವರು ಸ್ಪೋಟ ನಡೆದ ಸ್ಥಳದಲ್ಲಿ ಮೆಣದಬತ್ತಿ ಹಚ್ಚಿ ನೆನಪಿಸಿಕೊಂಡರು. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪತಿ ಬಾಲನ್, ``ಇಂದಿಗೆ ನನ್ನ ಪತ್ನಿಯನ್ನು ಕಳೆದುಕೊಂಡು ವರ್ಷ ಕಳೆದಿದೆ. ಹೀಗಾಗಿ ನಾವು ಈ ಸ್ಥಳದಲ್ಲಿ ಶ್ಪದಾಟಛಿಂಜಲಿ ಸಲ್ಲಿಸುತ್ತಿದ್ದೇವೆ. ನನ್ನ ಮಕ್ಕಳು ನೊಂದಿಕೊಳ್ಳುತ್ತಾರೆಂಬ ಕಾರಣಕ್ಕಾಗಿ ಈ ವಿಚಾರವನ್ನು ಅವರಿಗೆ ಹೇಳಿಲ್ಲ'' ಎಂದು ಹೇಳುವಾಗ ಅವರ ಕಣ್ಣಾಲಿಗಳು ತೆವವಾಗಿದ್ದವು.

``ಕರ್ನಾಟಕ ಸರ್ಕಾರ ಘಟನೆ ನಡೆದಾಗ ನಮಗೆ ಬಹಳ ಸಹಾಯ ಮಾಡಿತು. ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಎಲ್ಲ ರೀತಿಯಲ್ಲೂ ನಮಗೆ ಸಹಾಯ ಮಾಡಿತ್ತು. ಪರಿಹಾರದ ಹಣ ರು.5 ಲಕ್ಷಕೂಡ ಸರ್ಕಾರ ನೀಡಿದೆ. ನಮಗಾದ ಸ್ಥಿತಿ ಬೇರೆ ಯಾರಿಗೂ ಆಗಬಾರದು. ದೇಶದ ಯಾವ ರಾಜ್ಯದಲ್ಲೂ ಈ ರೀತಿಯ ಘಟನೆ ಸಂಭವಿಸಬಾರದು'' ಎಂದು ಭಾವುಕರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT