(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮಥಾಯ್ ವಿರುದ್ಧ ಸಿಬ್ಬಂದಿ ಪತ್ರ

ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ.ಮಥಾಯ್ ಅವರನ್ನು ಬೇರೆ ವಿಭಾಗಕ್ಕೆ ವರ್ಗಾವಣೆ ಮಾಡುವಂತೆ ಕೆಲವು ನೌಕರರು ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ...

ಬೆಂಗಳೂರು: ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ.ಮಥಾಯ್ ಅವರನ್ನು ಬೇರೆ ವಿಭಾಗಕ್ಕೆ ವರ್ಗಾವಣೆ ಮಾಡುವಂತೆ ಕೆಲವು ನೌಕರರು ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಮಥಾಯï ಅವರ ಕಚೇರಿಯಲ್ಲಿನ ವ್ಯವಸ್ಥಾಪಕರು ಸೇರಿದಂತೆ ಕೆಲವು ಸಿಬ್ಬಂದಿ ಪತ್ರದಲ್ಲಿ ಸಹಿ ಹಾಕಿದ್ದಾರೆ. ವರದಿ ತಯಾರಿಕೆ ಸೇರಿದಂತೆ ವೈಯಕ್ತಿಕ ಕಾರ್ಯಗಳಿಗೆ ಬಳಸಿಕೊಳ್ಳುವ ಮಥಾಯ್ ಅವರು ವಿನಾಕಾರಣ ಸಿಬ್ಬಂದಿಯನ್ನು ನಿಂದಿಸುತ್ತಿದ್ದಾರೆ ಎಂಬುದು ಕೇಳಿಬಂದಿರುವ ಪ್ರಮುಖ ಆರೋಪ. ಇದೇ ವೇಳೆ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆನೀಡಿರುವ ಮಥಾಯ್, ತಾವು ಯಾರನ್ನೂ ನಿಂದಿಸಿಲ್ಲ. ಅಂದಿನ ದಿನದ ಕೆಲಸವನ್ನು ಅಂದೆ ಮುಗಿಸುವಂತೆ ಸೂಚಿಸಿದ್ದೇನಷ್ಟೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಜಾಹೀರಾತುದಾರರೊಂದಿಗೆ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂದು ಮಥಾಯï ಅನೇಕರನ್ನು ನಿಂದಿಸುತ್ತಿದ್ದು ಇದು ಮಾನಸಿಕವಾಗಿ ನೋವುಂಟು ಮಾಡುತ್ತಿದೆ. ಅವರು ಪದೇ ಪದೇ ನೀಡುವ ವರದಿಯನ್ನು ಸಿಬ್ಬಂದಿ ಕೈಯಿಂದಲೇ ಸಿದ್ಧಪಡಿಸಿ ನಂತರ ಅದೇ ಸಿಬ್ಬಂದಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾರೆ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರದಲ್ಲಿ ವ್ಯವಸ್ಥಾಪಕಿ ಬಿ. ಲಕ್ಷ್ಮೀ, ಕಂದಾಯ ಪರಿವೀಕ್ಷಕ ಎ.ಅಮೃತ್ ರಾಜ್, ಪ್ರಥಮ ದರ್ಜೆ ಸಹಾಯಕ ಹೇಮಂತ್ ಕುಮಾರ್ ಸೇರಿ ಹಲವರು ಪತ್ರದಲ್ಲಿ ಸಹಿ
ಹಾಕಿದ್ದಾರೆ. ಇನ್ನು ಹೇಮಂತ್ ಕುಮಾರ್ ಕಡತಗಳನ್ನು ನೀಡದ ಬಗ್ಗೆ ಈ ಹಿಂದೆ ಮಥಾಯ್ ಅವರು ಆಯುಕ್ತರಿಗೆ ದೂರು ನೀಡಿದರಲ್ಲದೇ ಮಾಧ್ಯಮಗಳಲ್ಲಿಯೂ ಈ ವಿಚಾರ ಪ್ರಕಟಗೊಂಡ ಹಿನ್ನೆಲೆಯಲ್ಲಿ ಪಾಲಿಕೆ ನೌಕರರ ಸಂಘ ಖಂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT