ನಗರದ ಫ್ರೀಡಂ ಪಾರ್ಕಿನಲ್ಲಿ ವಿಶ್ವಮಾನವ ದಿನಾಚರಣೆ ಅಂಗವಾಗಿ ನಿವೃತ್ತ ಲೋಕಾಯುಕ್ತ ನ್ಯಾ.ಎನ್. ಸಂತೋಷ ಹೆಗ್ಡೆ ಹಾಗೂ ಸಾಹಿತಿ ಟಿ.ವಿ. ವೆಂಕಟಾಚಲಶಾಸ್ತ್ರಿ ಅವರು ಕುವೆಂಪು ಪ್ರತಿಮೆಗೆ 
ಜಿಲ್ಲಾ ಸುದ್ದಿ

ಲೋಕಾಯುಕ್ತಕ್ಕೆ ದಕ್ಷ ವ್ಯಕ್ತಿ ನೇಮಿಸಿ

`ನಾನು ಚೆನ್ನಾಗಿದ್ದೇನೆ, ಹೀಗಾಗಿ ಸಮಾಜ ಕೂಡ ಚೆನ್ನಾಗಿದೆ ಅಂದುಕೊಂಡಿದ್ದೆ. ಏಕೆಂದರೆ ನಾನು ಕೂಪಮಂಡೂಕನಂತಿದ್ದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಕೆಲಸ ಮಾಡಿದ ನಂತರ ಜನರ ಕಷ್ಟ ಏನೆಂಬುದು ಅರ್ಥವಾಯಿತು ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಹೇಳಿದ್ದಾರೆ...

ಬೆಂಗಳೂರು: `ನಾನು ಚೆನ್ನಾಗಿದ್ದೇನೆ, ಹೀಗಾಗಿ ಸಮಾಜ ಕೂಡ ಚೆನ್ನಾಗಿದೆ ಅಂದುಕೊಂಡಿದ್ದೆ. ಏಕೆಂದರೆ ನಾನು ಕೂಪಮಂಡೂಕನಂತಿದ್ದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಕೆಲಸ ಮಾಡಿದ ನಂತರ ಜನರ ಕಷ್ಟ ಏನೆಂಬುದು ಅರ್ಥವಾಯಿತು ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಬಿಎಂಪಿ, ಜನಶಕ್ತಿ ಕೇಂದ್ರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆಯಲ್ಲಿ ಮಾತನಾಡಿದ ಅವರು, ನಾನು ಲೋಕಾಯುಕ್ತನಾಗಿದ್ದ ಅವಧಿಯಲ್ಲಿ 23 ಸಾವಿರ ಪ್ರಕರಣ ದಾಖಲಿಸಲಾಗಿತ್ತು. 750ಕ್ಕೂ ಹೆಚ್ಚು ದಾಳಿ ನಡೆಸಲಾಗಿತ್ತು ಎಂದ ಅವರು, ಲೋಕಾಯುಕ್ತ ಸಂಸ್ಥೆ ಕಳೆದ 40 ವರ್ಷಗಳಿಂದ ಜನರ ಕಷ್ಟ ಹಾಗೂ ಸಮಸ್ಯೆಗಳನ್ನು ಸ್ಪಂದಿಸುತ್ತಾ ಬಂದಿತ್ತು. ಆದರೆ ಒಬ್ಬ ವ್ಯಕ್ತಿಯಿಂದ ಈಗ ಸಂಸ್ಥೆಗೆ ಕಳಂಕ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರ ಈ ಕೂಡಲೇ ಒಬ್ಬ ದಕ್ಷರನ್ನು ಆ ಸಂಸ್ಥೆಗೆ ನೇಮಕ ಮಾಡುವ ಮೂಲಕ ಜನಸ್ನೇಹಿ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಸಾಹಿತಿ ಟಿ.ವಿ.ವೆಂಕಟಾಚಲಶಾಸ್ತ್ರಿ ಮಾತನಾಡಿ, ಸಮಾಜದಲ್ಲಿ ಹಣ-ಜಾತಿಯ ಪ್ರಭಾವ ಹೆಚ್ಚಾಗಿದೆ. ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

T20 ವಿಶ್ವಕಪ್ 2026: 'ಚಿಂತೆ ಬೇಡ.. ಭಾರತೀಯ ಅಭಿಮಾನಿಗಳ ಸೈಲೆಂಟ್ ಮಾಡುತ್ತೇವೆ': Sam Curran ಅತ್ಯುತ್ಸಾಹ!

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?

SCROLL FOR NEXT