ಮಾತೆ ಮಹಾದೇವಿ 
ಜಿಲ್ಲಾ ಸುದ್ದಿ

ಕೂಡಲಸಂಗಮದಲ್ಲಿ ಶರಣ ಮೇಳ

ಶರಣ ಮೇಳ ಉತ್ಸವ ಸಮಿತಿಯಿಂದ ಜ.11 ರಿಂದ 15ರವರೆಗೆ ಕೂಡಲ ಸಂಗಮದಲ್ಲಿ `29ನೇ ಶರಣ ಮೇಳ' ಆಯೋಜಿಸಲಾಗಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷೆ

ಬೆಂಗಳೂರು: ಶರಣ ಮೇಳ ಉತ್ಸವ ಸಮಿತಿಯಿಂದ ಜ.11 ರಿಂದ 15ರವರೆಗೆ ಕೂಡಲ ಸಂಗಮದಲ್ಲಿ `29ನೇ ಶರಣ ಮೇಳ' ಆಯೋಜಿಸಲಾಗಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷೆ ಮಾತೆ ಮಹಾದೇವಿ ತಿಳಿಸಿದ್ದಾರೆ.

ಜ.11ರಂದು ರೈತ ಮುಖಂಡರಾದ ಗುರುಸ್ವಾಮಿಗೌಡ ಚಿಂತನಗೋಷ್ಠಿ ಉದ್ಘಾಟಿಸಲಿದ್ದು, ಕೃಷಿಕರ ಸಮಸ್ಯೆ ಮತ್ತು ನೈಸರ್ಗಿಕ ಕೃಷಿ ವಿಷಯದ ಕುರಿತು ಮಾತನಾಡಲಿದ್ದಾರೆ. ಜ.12ರಂದು ರಾಷ್ಟ್ರೀಯ ಬಸವ ದಳ 29ನೇ ಅಧಿವೇಶನ ನಡೆಯಲಿದ್ದು, ನಗರದ ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕ ಡಾ. ಕೆ.ಬಿ.ಲಿಂಗೇಗೌಡ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಭಾಗವಹಿಸಲಿದ್ದಾರೆ.

ಜ.13ರಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ಸಚಿವ ಎಚ್.ಕೆ.ಪಾಟೀಲ್ ಅವರು ಶರಣ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಸಮುದಾಯ ಪ್ರಾರ್ಥನೆ ಮತ್ತು ಸಿದ್ದರಾಮೇಶ್ವರ ಜಯಂತಿ ಮೇಳದ ಭಾಗವಾಗಿದ್ದು, ಬಸವಾಮೃತ ಶುದಟಛಿಜಲ ನೀರಿನ ಯಂತ್ರ ಉದ್ಘಾಟನೆ, ರಕ್ತದಾನ ಶಿಬಿರ, ಕ್ಯಾನ್ಸರ್ ತಪಾಸಣೆ, ಯೋಗಾಸನ ಸೇರಿದಂತೆ ಹಲವು ಕಾರ್ಯಕ್ರಮಗಳು ಮೇಳದಲ್ಲಿ ನಡೆಯಲಿದ್ದು, ಮಹಾರಾಷ್ಟ್ರ , ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಗೋವಾಗಳಿಂದ ಜನರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT