ಬೆಂಗಳೂರು ವಿಶ್ವ ವಿದ್ಯಾನಿಲಯ 
ಜಿಲ್ಲಾ ಸುದ್ದಿ

ಪಾಸ್‍ಗೆ ಒಂದು ವರ್ಷ ಅವಧಿ ಕಡಿತ: ಬೆಂಗಳೂರು ವಿವಿ ಅಕಾಡೆಮಿಕ್ ಸಭೆಯಲ್ಲಿ ನಿರ್ಧಾರ

ಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಪೂರ್ಣಗೊಳಿಸಲು ಇದುವರೆಗಿದ್ದ ಅವಧಿಗಿಂತ ಒಂದು ವರ್ಷ ಕಡಿತಗೊಳಿಸಿದೆ. ಪದವಿ ...

ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವ ವಿದ್ಯಾಲಯವು ಕಹಿ ಸುದ್ದಿ ನೀಡುತ್ತಿದೆ. ಬೆಂವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಪೂರ್ಣಗೊಳಿಸಲು ಇದುವರೆಗಿದ್ದ ಅವಧಿಗಿಂತ ಒಂದು ವರ್ಷ ಕಡಿತಗೊಳಿಸಿದೆ. ಪದವಿ ಶಿಕ್ಷಣಕ್ಕೆ ಮೂರು ವರ್ಷದ ಜೊತೆಗೆ ಹೆಚ್ಚುವರಿಯಾಗಿ ನೀಡುತ್ತಿದ್ದ ಮೂರು ವರ್ಷ, ಸ್ನಾತಕೋತ್ತರ ಮತ್ತು ಡಿಪ್ಲೊಮಾ ಶಿಕ್ಷಣಕ್ಕೆ ನೀಡುತ್ತಿದ್ದ ದ್ವಿಗುಣ ಅವಧಿಯನ್ನು ಎರಡು ವರ್ಷಕ್ಕೆ ಕಡಿತಗೊಳಿಸಿ ಬೆಂವಿವಿ ಅಕಾಡೆಮಿಕ್ ಸಭೆ ನಿರ್ಣಯ ಕೈಗೊಂಡಿದೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂವಿವಿ ಕುಲಪತಿ ಪ್ರೊ.ಬಿ.ತಿಮ್ಮೇಗೌಡ, ವಿಶ್ವವಿದ್ಯಾಲಯ ಧನಸಹಾಯ ಆಯೋಗದ ನಿರ್ದೇಶನದಂತೆ ಈ ನಿರ್ಣಯ ಕೈಗೊಳ್ಳಲಾಗಿದೆ. ದೇಶದ ಎಲ್ಲ ವಿವಿಗಳು ಏಕರೂಪದ ಶಿಕ್ಷಣ ನೀತಿ ಜಾರಿ ಉದ್ದೇಶದಿಂದ ಮತ್ತು ನಿಗದಿತ ಅವಧಿ ತೀರ್ಮಾನಕ್ಕೆ ಬದ್ಧವಾಗಿ ನಿರ್ಧರಿಸಲಾಗಿದೆ.

ಆರೋಗ್ಯ ಸಮಸ್ಯೆಯಿಂದ ಬಳಲುವ ಅಥವಾ ಬೇರೆಡೆ ಕೆಲಸ ಮಾಡಿಕೊಂಡು ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮಾತ್ರ ಹೆಚ್ಚಿನ ಒಂದು ವರ್ಷ ಅವಕಾಶ ನೀಡಲಾಗುವುದು. ಹೆಚ್ಚಿನ ಸಮಯ ಪಡೆದು ಪದವಿ ಪೂರ್ಣಗೊಳಿಸುವ ವಿದ್ಯಾರ್ಥಿಗಳು ರ್ಯಾಂಕ್ ಪಡೆಯಲು ಅನರ್ಹರು ಎಂದರು.

ವೀಸಾ ಸಂಬಂಧಿತ ಸಮಸ್ಯೆ ಎದುರಿಸುತ್ತಿದ್ದ ಇಂಡಿಯನ್ ಕೌನ್ಸಿಲ್ ಆಫ್ ಕಲ್ಚರಲ್ ರಿಲೇಶನ್ಸ್, ವಿದೇಶಾಂಗ ಇಲಾಖೆ, ಎಂಎಚ್‍ಆರ್‍ಡಿ ಸೇರಿದಂತೆ ರಾಷ್ಟ್ರೀಯ ಸಂಸ್ಥೆಗಳಿಂದ ಶಿಫಾರಸು ಮಾಡಲ್ಪಟ್ಟ ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳು ಬೆಂವಿವಿಯಲ್ಲಿ ಪಿಎಚ್.ಡಿ ಸೀಟು ಪಡೆಯಲು ಪ್ರವೇಶ ಪರೀಕ್ಷೆ ಬರೆಯುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ತಿದ್ದುಪಡಿ ತರಲಾಗಿದೆ ಎಂದು ಪ್ರೊ.ಬಿ. ತಿಮ್ಮೇಗೌಡ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?