ಝಾಕೀರ್ ನಾಯ್ಕ್ 
ಜಿಲ್ಲಾ ಸುದ್ದಿ

ಝಾಕಿರ್ ನಾಯ್ಕ್ ಗೆ ನಿರ್ಬಂಧ: ಸರ್ಕಾರದಿಂದ ಕೋರ್ಟ್ ಗೆ ಸ್ಪಷ್ಟನೆ

ಇಸ್ಲಾಂ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ ಗೆ ಮಂಗಳೂರು ನಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಸ್ಪಷ್ಟಪಡಿಸಿದೆ.

ಬೆಂಗಳೂರು: ಇಸ್ಲಾಂ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ ಗೆ ಮಂಗಳೂರು ನಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಸ್ಪಷ್ಟಪಡಿಸಿದೆ.

ಮಂಗಳೂರು ನಗರ ಪ್ರವೇಶಿಸದಂತೆ ಝಾಕೀರ್ ನಾಯ್ಕ್ ಗೆ ನಿರ್ಬಂಧ ವಿಧಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ವಕೀಲ ಎನ್.ಪಿ.ಅಮೃತೇಶ್ ಸೇರಿದಂತೆ 21 ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ರಾಜ್ಯ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್ ಕೋರ್ಟ್‍ಗೆ ಆದೇಶ ಪ್ರತಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಜಾಕೀರ್ ನಾಯ್ಕ್  ಡಿ.31ರಿಂದ ಏಳು ದಿನಗಳ ಕಾಲ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಪ್ರವೇಶಿಸಬಾರದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಡಿ.26ರಂದು ಆದೇಶ ಹೊರಡಿಸಿದ್ದಾರೆ ಎಂದು ಅಡ್ವೋಕೇಟ್ ಜನರಲ್ ಜ್ಞಾಪನಾ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಜ್ಞಾಪನಾ ಪತ್ರವನ್ನು ಪುರಸ್ಕರಿಸಿದ ನ್ಯಾ. ಆನಂದ ಬೈರಾರೆಡ್ಡಿ ಮತ್ತು ನ್ಯಾ.ಬಿ.ವೀರಪ್ಪ ಅವರಿದ್ದ ರಜಾಕಾಲದ ವಿಭಾಗೀಯ ಪೀಠ, ಅರ್ಜಿದಾರರ ಮನವಿ ಈಡೇರಿದ ಕಾರಣ ವಿಚಾರಣೆ ಮುಂದುವರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ: ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್

ದೆಹಲಿಯಲ್ಲಿ ಮತ್ತೊಂದು ಕಟ್ಟಡ ಕುಸಿತ ಭೀತಿ: ಏಕಾಏಕಿ ವಾಲಿದ ನಾಲ್ಕಂತಸ್ತಿನ ಕಟ್ಟಡ, ನೆಲಸಮಗೊಳಿಸಲು MCD ಸೂಚನೆ

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

BRICS summit 2026: ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣ ವಿರುದ್ಧ ಪ್ರಧಾನಿ ವಿರುದ್ಧ ಮೋದಿ ಎಚ್ಚರಿಕೆ! Video

‘ಹೂಡಿಕೆ ತರಲು ಹೋಗಿದ್ದಾರೋ?, ಸ್ನೇಹಿತನ Race ನೋಡಲು ಹೋಗಿದ್ದಾರೋ?’.. ವಿಜಯ್‌ಗೆ DMK ಪ್ರಶ್ನೆ, 'ತಪ್ಪೇನು?' TVK ಖಡಕ್ ತಿರುಗೇಟು