ಝಾಕೀರ್ ನಾಯ್ಕ್ 
ಜಿಲ್ಲಾ ಸುದ್ದಿ

ಝಾಕಿರ್ ನಾಯ್ಕ್ ಗೆ ನಿರ್ಬಂಧ: ಸರ್ಕಾರದಿಂದ ಕೋರ್ಟ್ ಗೆ ಸ್ಪಷ್ಟನೆ

ಇಸ್ಲಾಂ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ ಗೆ ಮಂಗಳೂರು ನಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಸ್ಪಷ್ಟಪಡಿಸಿದೆ.

ಬೆಂಗಳೂರು: ಇಸ್ಲಾಂ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ ಗೆ ಮಂಗಳೂರು ನಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಸ್ಪಷ್ಟಪಡಿಸಿದೆ.

ಮಂಗಳೂರು ನಗರ ಪ್ರವೇಶಿಸದಂತೆ ಝಾಕೀರ್ ನಾಯ್ಕ್ ಗೆ ನಿರ್ಬಂಧ ವಿಧಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ವಕೀಲ ಎನ್.ಪಿ.ಅಮೃತೇಶ್ ಸೇರಿದಂತೆ 21 ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ರಾಜ್ಯ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್ ಕೋರ್ಟ್‍ಗೆ ಆದೇಶ ಪ್ರತಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಜಾಕೀರ್ ನಾಯ್ಕ್  ಡಿ.31ರಿಂದ ಏಳು ದಿನಗಳ ಕಾಲ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಪ್ರವೇಶಿಸಬಾರದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಡಿ.26ರಂದು ಆದೇಶ ಹೊರಡಿಸಿದ್ದಾರೆ ಎಂದು ಅಡ್ವೋಕೇಟ್ ಜನರಲ್ ಜ್ಞಾಪನಾ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಜ್ಞಾಪನಾ ಪತ್ರವನ್ನು ಪುರಸ್ಕರಿಸಿದ ನ್ಯಾ. ಆನಂದ ಬೈರಾರೆಡ್ಡಿ ಮತ್ತು ನ್ಯಾ.ಬಿ.ವೀರಪ್ಪ ಅವರಿದ್ದ ರಜಾಕಾಲದ ವಿಭಾಗೀಯ ಪೀಠ, ಅರ್ಜಿದಾರರ ಮನವಿ ಈಡೇರಿದ ಕಾರಣ ವಿಚಾರಣೆ ಮುಂದುವರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT