ಜಿಲ್ಲಾ ಸುದ್ದಿ

ಎಟಿಎಂ ದೋಚಲು ಯತ್ನ: ಇಬ್ಬರ ಬಂಧನ

ಇಂದಿರಾನಗರ ಸಿಎಂಎಚ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿ ಹಣ ದೋಚಲು...

ಬೆಂಗಳೂರು: ಇಂದಿರಾನಗರ ಸಿಎಂಎಚ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿ ಹಣ ದೋಚಲು ಯತ್ನಿಸಿದ ದುಷ್ಕರ್ಮಿಗಳಿಬ್ಬರನ್ನು ಸೆಕ್ಯುರಿಟಿ ಗಾರ್ಡ್, ಸ್ಥಳೀಯರು ಹಿಡಿದು ಥಳಿಸಿ ಇಂದಿರಾನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಿಹಾರ ಮೂಲದ ರಾಮ್ ಕುಮಾರ್ ಗುಪ್ತಾ (28) ಮತ್ತು ಲಕ್ಷ್ಮೀದೇವಿ ನಗರದ ಮ್ಯಾಥ್ಯು (22) ಬಂಧಿತರು. ಸೋಮವಾರ ನಸುಕಿನ 3 ರ ಸುಮಾರಿಗೆ ಪಲ್ಸರ್ ಬೈಕ್ ನಲ್ಲಿ  
ಬಂದ ಆರೋಪಿಗಳು, ಮಾರಕಾಸ್ತ್ರಗಳಿಂದ ಎಟಿಎಂ ಕೇಂದ್ರದ ಬಾಗಿಲು ಒಡೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಘಟಕದೊಳಗಿದ್ದ ಸೆಕ್ಯುರಿಟಿ ಗಾರ್ಡ್ ವೆಂಕಟಕೃಷ್ಣ, ಬಾಗಿಲು ಭದ್ರ ಪಡಿಸಿ ಪೊಲೀಸ್ ನಿಯಂತ್ರ ಣ ಕೊಠಡಿಗೆ ಕರೆ ಮಾಡಿದ್ದಾರೆ.

ಮಾಹಿತಿ ಪಡೆದ ಇಂದಿರಾ ನಗರದ ಗಸ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರನ್ನು ಗಮನಿಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ಕಾರಿನಲ್ಲಿ ಬರುತ್ತಿದ್ದ ಯುವಕರು ಹಾಗೂ ಸೆಕ್ಯುರಿಟಿ ಗಾರ್ಡ್ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಬಂಧಿತರು ಟ್ರಿನಿಟಿ ವೃತ್ತದಲ್ಲಿರುವ ಬಾರ್‍ನಲ್ಲಿ ಕೆಲಸ ಮಾಡುತ್ತಿದ್ದರು. ಬೇರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಪರಿಶೀಲನೆ ನಡೆದಿದೆ ಎಂದು ಇಂದಿರಾನಗರ ಪೊಲೀಸರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT