ಜಿಲ್ಲಾ ಸುದ್ದಿ

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಜ್ಜು

ಅರ್ಕಾವತಿ ಡಿನೋಟಿಫಿಕೇಷನ್, ಅರಣ್ಯ ಒತ್ತುವರಿ, ಇಂಧನ ಇಲಾಖೆಯಲ್ಲಿನ ಅಕ್ರಮ ಹಾಗೂ ಕೆಪಿಎಸ್‍ಸಿ ನೇಮಕ ವಿವಾದವನ್ನು ಉಭಯ ಸದನಗಳಲ್ಲಿ ಚರ್ಚೆಗೆ...

ಬೆಂಗಳೂರು: ಅರ್ಕಾವತಿ ಡಿನೋಟಿಫಿಕೇಷನ್, ಅರಣ್ಯ ಒತ್ತುವರಿ, ಇಂಧನ ಇಲಾಖೆಯಲ್ಲಿನ ಅಕ್ರಮ ಹಾಗೂ ಕೆಪಿಎಸ್‍ಸಿ ನೇಮಕ ವಿವಾದವನ್ನು ಉಭಯ ಸದನಗಳಲ್ಲಿ ಚರ್ಚೆಗೆ
ತೆಗೆದುಕೊಳ್ಳಲು ಬಿಜೆಪಿ ಶಾಸಕಾಂಗ ಸಭೆ ನಿರ್ಧರಿಸಿದೆ. ಕೆಪಿಎಸ್‍ಸಿ ಹೊರತುಪಡಿಸಿ ಉಳಿದ ವಿಚಾರಗಳು ಹಿಂದಿನ ಅ„ವೇಶನದಲ್ಲಿಯೂ ಪ್ರಸ್ತಾಪ ವಾಗಿದ್ದವು. ಆದರೆ ಈ ಬಾರಿ ಸರ್ಕಾರದ ಮೇಲೆ ಮತ್ತಷ್ಟು ದಾಖಲೆಗಳೊಂದಿಗೆ ಟೀಕಾ ಪ್ರಹಾರ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರದ ವಿರುದ್ಧ ಮಾತನಾಡುವಾಗ ಪ್ರತಿಯೊಬ್ಬ ಸದಸ್ಯರೂ ನಾಯಕರ ಬೆಂಬಲಕ್ಕೆ ನಿಲ್ಲುವಂತೆ ಸೂಚಿಸಲಾಗಿದೆ. ಆದರೆ, ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ಶಾಸಕಾಂಗ ಸಭೆಯಲ್ಲಿ ಬಿಸಿ ಚರ್ಚೆಗೆ ಕಾರಣವಾಗಿತ್ತು. ಬೆರಳೆಣಿಕೆ ಶಾಸಕರು ಮಾತ್ರ ಈ ಹೋರಾಟಕ್ಕೆ ಮುಂದೆ ಬಂದಿರುವುದು ಹಾಗೂ ಮುಜುಗರ ಅನುಭವಿಸಿರುವುದಕ್ಕೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಕಾಂಗ್ರೆಸ್ ವಿರುದ್ಧದ ಹೋರಾಟದಲ್ಲಿರುವ ಗೊಂದಲಗಳ ಬಗ್ಗೆ ಬೆಂಗಳೂರು ನಗರ ಶಾಸಕರು ಹಾಗೂ ಕೆಲವು ಬಿಜೆಪಿ ಮುಖಂಡರ ನಡುವಿನ ಶೀತಲ ಸಮರ ಶಾಸಕಾಂಗ ಸಭೆಯಲ್ಲಿಯೂ ಕಂಡು ಬಂದಿದೆ. ಅರ್ಕಾವತಿ ಹೋರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಶಾಸಕರ ಅಭಿಪ್ರಾಯ ಕೇಳಿದಾಗ ಆರ್.ಅಶೋಕ ಹಾಗೂ ಜಗದೀಶ್‍ಕುಮಾರ್ ಮೌನವಹಿಸಿದ್ದರು ಎನ್ನಲಾಗಿದೆ. ಆದರೆ ಉಳಿದ ಶಾಸಕರು ತಮ್ಮ ವಿರೋಧವಿಲ್ಲ ಎಂದು ಪಕ್ಷದ ಮುಖಂಡರಿಗೆ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಇಂಧನ ಇಲಾಖೆಯಲ್ಲಿನ ಅಕ್ರಮಗಳ ಕುರಿತಂತೆ ಈಶ್ವರಪ್ಪ ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿದ್ದಾರೆ. ಗಣಿ ಅಕ್ರಮ ವಿರುದಟಛಿ ಹೋರಾಡಿದ್ದ ಸಿದ್ದರಾಮಯ್ಯ ಅವರು ಆರು ಗಣಿ ಕಂಪನಿಗಳಿಗೆ ಅಕ್ರಮವಾಗಿ ಪರವಾನಗಿ ಶಿಫಾರಸು ಮಾಡಿರುವ ಪ್ರಕರಣವನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT