ರಾಜನಾಥ್ ಸಿಂಗ್ 
ಜಿಲ್ಲಾ ಸುದ್ದಿ

ಕರಾವಳಿ ಭದ್ರತೆಗೆ ಕೇಂದ್ರ ಬೆಟಾಲಿಯನ್

ರಾಜ್ಯದ ಕರಾವಳಿಯನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಕರಾವಳಿ ಕಾವಲು ಪಡೆ ಬೆಟಾಲಿಯನ್ ಹಾಗೂ...

ಬೆಂಗಳೂರು: ರಾಜ್ಯದ ಕರಾವಳಿಯನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಕರಾವಳಿ ಕಾವಲು ಪಡೆ ಬೆಟಾಲಿಯನ್ ಹಾಗೂ ಭಾರತೀಯ ಮೀಸಲು ಪೊಲೀಸ್ ಪಡೆಗೆ ಮತ್ತೆರಡು ಬೆಟಾಲಿಯನ್ ಒದಗಿಸುವು ದಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಆಶ್ವಾಸನೆ ನೀಡಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಉನ್ನತ ಮಟ್ಟದ ಪೊಲೀಸ್ ಅಧಿಕಾರಿ ಗಳೊಂದಿಗೆ ನಡೆಸಿದ ಸಭೆಯಲ್ಲಿ ರಾಜ್ಯದ ಬೇಡಿಕೆಗಳಿಗೆ ರಾಜನಾಥ್ ಸಿಂಗ್ ಸ್ಪಂದಿಸಿದರು. ತುಮಕೂರು ಹಾಗೂ ದಾವಣಗೆರೆ ಯಲ್ಲಿ ಮೀಸಲು ಪಡೆ ಬೆಟಾಲಿಯನ್ ಸ್ಥಾಪನೆಯಾಗಬೇಕು ಎನ್ನುವ ರಾಜ್ಯದ ಪ್ರಸ್ತಾಪವನ್ನು ದೆಹಲಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಚಿವರು ಹೇಳಿದರು.

ನಗರದಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರ ಮೇಲೆ ಸೂಕ್ತ ನಿಗಾ ಇರಿಸಬೇಕು. ಈಶಾನ್ಯ ಭಾರತೀಯರ ಬಗ್ಗೆ ಭೇದಭಾವ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರು ನಗರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಇದೇ ವೇಳೆ ದಾಖಲೆಗಳಿಲ್ಲದೇ ಗ್ರಾಹಕರು, ಸಮಾಜಘಾತುಕ ಶಕ್ತಿಗಳ ಕೈಗೆ ಮೊಬೈಲ್ ಫೋನ್ ಸಿಮ್ ಕಾರ್ಡ್ ಸಿಗುತ್ತಿರುವ ಬಗ್ಗೆ ಚರ್ಚೆಯಾಯಿತು. ಈ ರೀತಿಯ ಸಿಮ್ ಕಾರ್ಡ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

ಜನಸ್ನೇಹಿ, ಕಠಿಣ ಪೊಲೀಸ್ ಆಗಿರಿ:
ಪೊಲೀಸರು ಜನಸ್ನೇಹಿಯಾಗಿರಬೇಕು ಎಂದು ಒತ್ತಿ ಹೇಳಿದ ಗೃಹ ಸಚಿವರು, ಉಗ್ರರು ಹಾಗೂ ಅಪರಾ„ಗಳ ಪಾಲಿಗೆ ಟಫ್ ಪೊಲೀಸ್ ಆಗಿದ್ದು ಕಠಿಣ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು. ರಾಜ್ಯದಲ್ಲಿ ಕೇಂದ್ರ ಗೃಹ ಇಲಾಖೆಗೆ ಸಂಬಂಧಿಸಿದ, ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಬೇಗ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು.
ನಿರ್ಭಯಾ ಫಂಡ್‍ನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಅಲ್ಲದೇ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಶೇ.20ರಷ್ಟು ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವಂತೆ ಹೇಳಿದರು.

ಸಭೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ಬಾಂಬ್ ಸ್ಫೋಟ, ಶಂಕಿತ ಉಗ್ರರ ಬಂಧನ, ಟರ್ಕಿಯಿಂದ ಗಡಿಪಾರಾದವರ ವಿಚಾರಣೆ ಹಾಗೂ ಒಟ್ಟಾರೆಯಾಗಿ ನಗರ ಪೊಲೀಸರ ಕರ್ತವ್ಯ ನಿರ್ವಹಣೆ ಬಗ್ಗೆ ಗೃಹ ಸಚಿವರಿಗೆ ವಿವರಿಸಲಾಗಿದೆ. ಅಲ್ಲದೇ ನಗರಕ್ಕೆ ಅಗತ್ಯವಿರುವ ಹೊಸ ಯೋಜನೆಗಳು ಹಾಗೂ ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಲಾಗಿದ್ದು ಅದಕ್ಕೆ ಸಚಿವರು ಸೂಕ್ತವಾಗಿ ಸ್ಪಂದಿಸಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT