ಜಿಲ್ಲಾ ಸುದ್ದಿ

ಅಕ್ರಮ ಸಕ್ರಮ: ಅರ್ಜಿ ವಜಾ

ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಇದ್ದ ಕೆಲವು ದೋಷಗಳನ್ನು ಹೊಸ ಅಧಿಸೂಚನೆಯಲ್ಲಿ...

ಬೆಂಗಳೂರು: ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಇದ್ದ ಕೆಲವು ದೋಷಗಳನ್ನು ಹೊಸ ಅಧಿಸೂಚನೆಯಲ್ಲಿ ಸರಿಪಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಪೀಠದ ಗಮನಕ್ಕೆ ತಂದಿದೆ.

ಈ ಹಿನ್ನೆಲೆಯಲ್ಲಿ ಯೋಜನೆಗೆ ಸಂಬಂಧಿಸಿದಂತೆ ಸದ್ಯ ಸಲ್ಲಿಕೆ ಯಾಗಿರುವ ಅರ್ಜಿ ಮಾನ್ಯತೆ ಪಡೆಯುವುದಿಲ್ಲ ಎಂದು ಆದೇಶಿಸಿ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ. 2007ರಲ್ಲಿ ಮಂಡಿಸಲಾಗಿದ್ದ ಅಕ್ರಮ- ಸಕ್ರಮ ಯೋಜನೆಯಲ್ಲಿ ಲೋಪದೋಷಗಳಿರುವುದಾಗಿ ಸಿಟಿಜನ್ ಫೋರಂ ಫಾರ್ ಮಂಗಳೂರು ಡೆವಲಪ್ ಮೆಂಟ್ ಸೇರಿ ಅನೇಕರು ಹೈಕೋರ್ಟ್‍ಗೆ ಅರ್ಜಿ ದಾಖಲಿಸಿದ್ದರು.

ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್. ವಘೇಲಾ ಮತ್ತು ನ್ಯಾ.ಅಶೋಕ್ ಬಿ ಹಿಂಚಿಗೇರಿ ಅವರಿದ್ದ ವಿಭಾಗೀಯ ಪೀಠ, ಸರ್ಕಾರ ಈ ಕುರಿತು ಹೊಸದಾದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಅರ್ಜಿ ತನ್ನ ಮಾನ್ಯತೆ ಕಳೆದುಕೊಂಡಿದೆ. ಸರ್ಕಾರ ಸದ್ಯ ಹೊರಡಿಸಿರುವ ಅಧಿಸೂಚನೆ ಯಲ್ಲಿ ಲೋಪಗಳಿದ್ದರೆ ಹೊಸ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸಿ ಅರ್ಜಿ ವಜಾಗೊಳಿಸಿದೆ. ಇದರಿಂದ ಕಳೆದ ಎಂಟು ವರ್ಷದಿಂದ ಅಕ್ರಮ-ಸಕ್ರಮ ಯೋಜನೆಯ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ಹೈಕೋರ್ಟ್ ಅಂಗಳದಿಂದ ಸದ್ಯ ಹೊರ ಬಂದಿದ್ದು, ಸರ್ಕಾರದ ಮುಂದಿನ ನಡೆ ಕುರಿತು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.

ಸರ್ಕಾರ ಹೊಸ ಅಧಿ ಸೂಚನೆಯನ್ನು 2014ರ ಮೇ 28ರಲ್ಲಿ ಹೊರಡಿಸಿತ್ತು. ಹಿಂದಿನ ಅಧಿಸೂಚನೆಯಲ್ಲಿದ್ದ ದೋಷಗಳನ್ನು ಸರಿಪಡಿಸಲು ಆಕ್ಷೇಪಣೆ ಹಾಗೂ ಸಲಹೆಗಳನ್ನು ಸರ್ಕಾರ ಪಡೆದಿತ್ತು. ಸದ್ಯ ಆ ಸಲಹೆಗಳನ್ನು ಪರಿಗಣಿಸಿ ಪರಿಷ್ಕೃತ ಅಧಿಸೂಚನೆ ಹೊರಡಿಸಲಾಗಿದೆ. ಸಕ್ರಮ ಗೊಳಿಸುವ ಸಂಬಂಧ ಅರ್ಜಿ ಆಹ್ವಾನಿಸಲು ಪ್ರಚಾರ ನೀಡಬೇಕಿದ್ದು, ಸದ್ಯ ಲೋಪಗಳನ್ನು ಸರಿಪಡಿಸಲಾಗಿದೆ ಎಂದು ಈ ಹಿಂದೆ ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಪೀಠದ ಗಮನಕ್ಕೆ ತಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT