ಪ್ರವೀಣ್ ತೊಗಾಡಿಯಾ 
ಜಿಲ್ಲಾ ಸುದ್ದಿ

ಬೆಂಗಳೂರಿಗೆ ತೊಗಾಡಿಯಾ ಪ್ರವೇಶ ನಿರ್ಬಂಧ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರಿಗೆ ಪ್ರವೀಣ್ ತೊಗಾಡಿಯಾ ಪ್ರವೇಶ ನಿರ್ಬಂಧ ತಡೆಗೆ ಹೈಕೋರ್ಟ್ ನಿರಾಕರಿಸಿದ್ದು, ನಿರ್ಬಂಧ ಹೇರುವ...

ಬೆಂಗಳೂರು:  ಬೆಂಗಳೂರಿಗೆ ಪ್ರವೀಣ್ ತೊಗಾಡಿಯಾ ಪ್ರವೇಶ ನಿರ್ಬಂಧ ತಡೆಗೆ ಹೈಕೋಟ್ ನಿರಾಕರಿಸಿದ್ದು, ನಿರ್ಬಂಧ ಹೇರುವ ಅಧಿಕಾರ ಆಯುಕ್ತರಿಗೆ ಇದೆ ಎಂದು ಶುಕ್ರವಾರ ಹೇಳಿದೆ.

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ಫೆಬ್ರವರಿ 5ರಿಂದ 11ರವರೆಗೆ ಬೆಂಗಳೂರು ಪ್ರವೇಶಿಸದಂತೆ ಪೊಲೀಸ್ ಆಯುಕ್ತರು ನಿರ್ಬಂಧದ ಆದೇಶ ಹೊರಡಿಸಿದ್ದರು. ಆಯುಕ್ತರ ಆದೇಶ ಪ್ರಶ್ನಿಸಿ ಹಾಗೂ ಮಧ್ಯಂತರ ತಡೆ ನೀಡುವಂತೆ ಕೋರಿ ತೊಗಾಡಿಯಾ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕಸದಸ್ಯ ಪೀಠ, ಆಯುಕ್ತರ ಆದೇಶಕ್ಕೆ ತಡೆ ಹಾಕಲು ಸಾಧ್ಯವಿಲ್ಲ. ನಿರ್ಬಂಧ ಹೇರುವ ಅಧಿಕಾರ ಪೊಲೀಸ್ ಆಯುಕ್ತರಿಗೆ ಇದೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಹಿಂದೂ ವಿರಾಟ ಸಮಾವೇಶ ಹಾಗೂ ಸುವರ್ಣ ಜಯಂತಿ ಆಚರಣೆಯಲ್ಲಿ ಭಾಗವಹಿಸಲು ಪ್ರವೀಣ್ ಭಾಯ್ ತೊಗಾಡಿಯಾ ಹಾಜರಾಗಬೇಕಿತ್ತು. ವಿಶ್ವ ಹಿಂದೂ ಪರಿಷತ್‍ನ ಸುವರ್ಣ ಜಯಂತಿ ಆಚರಣೆಗೆ ಭಾಗವಹಿಸಲು ಇಚ್ಛಿಸಿದ್ದ ತೊಗಾಡಿಯಾ ಅವರಿಗೆ ನಗರ ಪ್ರವೇಶಿಸದಂತೆ ಆಯುಕ್ತರು ಆದೇಶ ಹೊರಡಿಸಿದ್ದರು.  

ತೊಗಾಡಿಯಾ ಎಲ್ಲೆಡೆ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುವಂಥ ಪ್ರಚೋದನ ಕಾರಿ ಹೇಳಿಕೆ ನೀಡುತ್ತಾರೆ. ಆತ ಒಬ್ಬ ಅಪಾಯಕಾರಿ ಮನುಷ್ಯನಾಗಿದ್ದು, ಅವರ ಪೂರ್ವಾಪರ ತಿಳಿದುಕೊಂಡು ಆಯುಕ್ತರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾಡುವ ಪ್ರಚೋದನಕಾರಿ ಭಾಷಣದಿಂದ ಶಾಂತಿ ಸೌಹಾರ್ದತೆ ಕದಡುವ ಸಾಧ್ಯತೆಯಿದೆ.

ಇತ್ತೀಚೆಗೆ ಕೊಪ್ಪಳದಲ್ಲಿ ವಿಹಿಂಪ ಆಯೋಜಿಸಿರುವ ಸುವರ್ಣ ಸಂಭ್ರಮ ಕಾರ್ಯಕ್ರದಲ್ಲಿ ಕೋಮು ಗಲಭೆ ನಡೆದಿರುವ ವರದಿ ಆಗಿದ್ದು, ಬೆಂಗಳೂರಿಗೆ ಅವರು ಆಗಮಿಸಿದರೆ ಇದೇ  ಘಟನೆ ಮರುಕಳುಸುವ ಸಾಧ್ಯತೆಗಳಿವೆ ಎಂದು ಸರ್ಕಾರದ ಪರ ವಕೀಲರು ವಾದಿಸಿದರು. ವಾದ ವಿವಾದ ಆಲಿಸಿದ ಏಕಸದಸ್ಯ ಪೀಠ ಇಂದು ಆಯುಕ್ತರ ಆದೇಶಕ್ಕೆ ತಡೆ ಒಡ್ಡಲು ಸಾಧ್ಯವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT