ಪ್ರವೀಣ್ ತೊಗಾಡಿಯಾ 
ಜಿಲ್ಲಾ ಸುದ್ದಿ

ಬೆಂಗಳೂರಿಗೆ ತೊಗಾಡಿಯಾ ಪ್ರವೇಶ ನಿರ್ಬಂಧ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರಿಗೆ ಪ್ರವೀಣ್ ತೊಗಾಡಿಯಾ ಪ್ರವೇಶ ನಿರ್ಬಂಧ ತಡೆಗೆ ಹೈಕೋರ್ಟ್ ನಿರಾಕರಿಸಿದ್ದು, ನಿರ್ಬಂಧ ಹೇರುವ...

ಬೆಂಗಳೂರು:  ಬೆಂಗಳೂರಿಗೆ ಪ್ರವೀಣ್ ತೊಗಾಡಿಯಾ ಪ್ರವೇಶ ನಿರ್ಬಂಧ ತಡೆಗೆ ಹೈಕೋಟ್ ನಿರಾಕರಿಸಿದ್ದು, ನಿರ್ಬಂಧ ಹೇರುವ ಅಧಿಕಾರ ಆಯುಕ್ತರಿಗೆ ಇದೆ ಎಂದು ಶುಕ್ರವಾರ ಹೇಳಿದೆ.

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ಫೆಬ್ರವರಿ 5ರಿಂದ 11ರವರೆಗೆ ಬೆಂಗಳೂರು ಪ್ರವೇಶಿಸದಂತೆ ಪೊಲೀಸ್ ಆಯುಕ್ತರು ನಿರ್ಬಂಧದ ಆದೇಶ ಹೊರಡಿಸಿದ್ದರು. ಆಯುಕ್ತರ ಆದೇಶ ಪ್ರಶ್ನಿಸಿ ಹಾಗೂ ಮಧ್ಯಂತರ ತಡೆ ನೀಡುವಂತೆ ಕೋರಿ ತೊಗಾಡಿಯಾ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕಸದಸ್ಯ ಪೀಠ, ಆಯುಕ್ತರ ಆದೇಶಕ್ಕೆ ತಡೆ ಹಾಕಲು ಸಾಧ್ಯವಿಲ್ಲ. ನಿರ್ಬಂಧ ಹೇರುವ ಅಧಿಕಾರ ಪೊಲೀಸ್ ಆಯುಕ್ತರಿಗೆ ಇದೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಹಿಂದೂ ವಿರಾಟ ಸಮಾವೇಶ ಹಾಗೂ ಸುವರ್ಣ ಜಯಂತಿ ಆಚರಣೆಯಲ್ಲಿ ಭಾಗವಹಿಸಲು ಪ್ರವೀಣ್ ಭಾಯ್ ತೊಗಾಡಿಯಾ ಹಾಜರಾಗಬೇಕಿತ್ತು. ವಿಶ್ವ ಹಿಂದೂ ಪರಿಷತ್‍ನ ಸುವರ್ಣ ಜಯಂತಿ ಆಚರಣೆಗೆ ಭಾಗವಹಿಸಲು ಇಚ್ಛಿಸಿದ್ದ ತೊಗಾಡಿಯಾ ಅವರಿಗೆ ನಗರ ಪ್ರವೇಶಿಸದಂತೆ ಆಯುಕ್ತರು ಆದೇಶ ಹೊರಡಿಸಿದ್ದರು.  

ತೊಗಾಡಿಯಾ ಎಲ್ಲೆಡೆ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುವಂಥ ಪ್ರಚೋದನ ಕಾರಿ ಹೇಳಿಕೆ ನೀಡುತ್ತಾರೆ. ಆತ ಒಬ್ಬ ಅಪಾಯಕಾರಿ ಮನುಷ್ಯನಾಗಿದ್ದು, ಅವರ ಪೂರ್ವಾಪರ ತಿಳಿದುಕೊಂಡು ಆಯುಕ್ತರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾಡುವ ಪ್ರಚೋದನಕಾರಿ ಭಾಷಣದಿಂದ ಶಾಂತಿ ಸೌಹಾರ್ದತೆ ಕದಡುವ ಸಾಧ್ಯತೆಯಿದೆ.

ಇತ್ತೀಚೆಗೆ ಕೊಪ್ಪಳದಲ್ಲಿ ವಿಹಿಂಪ ಆಯೋಜಿಸಿರುವ ಸುವರ್ಣ ಸಂಭ್ರಮ ಕಾರ್ಯಕ್ರದಲ್ಲಿ ಕೋಮು ಗಲಭೆ ನಡೆದಿರುವ ವರದಿ ಆಗಿದ್ದು, ಬೆಂಗಳೂರಿಗೆ ಅವರು ಆಗಮಿಸಿದರೆ ಇದೇ  ಘಟನೆ ಮರುಕಳುಸುವ ಸಾಧ್ಯತೆಗಳಿವೆ ಎಂದು ಸರ್ಕಾರದ ಪರ ವಕೀಲರು ವಾದಿಸಿದರು. ವಾದ ವಿವಾದ ಆಲಿಸಿದ ಏಕಸದಸ್ಯ ಪೀಠ ಇಂದು ಆಯುಕ್ತರ ಆದೇಶಕ್ಕೆ ತಡೆ ಒಡ್ಡಲು ಸಾಧ್ಯವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT