ಜಿಲ್ಲಾ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಜಗಳ, ಕೊಲೆ

ಬೆಂಗಳೂರು: ಮದ್ಯಸೇವನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

ಸುಬ್ರಹ್ಮಣ್ಯಪುರ ವ್ಯಾಪ್ತಿಯ ಚುಂಚಘಟ್ಟ ನಿವಾಸಿ ಉದಯ್ ಶಂಕರ್ ಅಲಿಯಾಸ್ ಉದಯ್ (22) ಕೊಲೆಯಾದವರು. ಈತನ ಸ್ನೇಹಿತ ದಿಲೀಪ್ (23) ಎಂಬಾತನ ಮೇಲೆ ಹಲ್ಲೆ ನಡೆಸಿದ್ದು, ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಉದಯ್ ಮದುವೆ ಸಮಾರಂಭಗಳಿಗೆ ಹೂವಿನ ಅಲಂಕಾರ ಮಾಡುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

SCROLL FOR NEXT