ರಾಜ್ಯಪಾಲ ವಿ.ಆರ್.ವಾಲಾ 
ಜಿಲ್ಲಾ ಸುದ್ದಿ

ಗೃಹರಕ್ಷಕ ದಳ ರಾಜ್ಯಕ್ಕೇ ಸೀಮಿತ ಆಗಿರಬಾರದು: ರಾಜ್ಯಪಾಲ ವಾಲಾ

ಸಾರ್ವಜನಿಕರ ರಕ್ಷಣೆ ನಿಟ್ಟಿನಲ್ಲಿ ಗೃಹರಕ್ಷಕ ದಳಗಳು ಕೇವಲ ಕರ್ನಾಟಕ ರಾಜ್ಯಕ್ಕೆ ಸೀಮಿತವಾಗಿರಬಾರದು...

ಬೆಂಗಳೂರು: ಸಾರ್ವಜನಿಕರ ರಕ್ಷಣೆ ನಿಟ್ಟಿನಲ್ಲಿ ಗೃಹರಕ್ಷಕ ದಳಗಳು ಕೇವಲ ಕರ್ನಾಟಕ ರಾಜ್ಯಕ್ಕೆ ಸೀಮಿತವಾಗಿರಬಾರದು ಎಂದು ರಾಜ್ಯಪಾಲ ವಿ.ಆರ್.ವಾಲಾ ಹೇಳಿದ್ದಾರೆ.

ಶುಕ್ರವಾರ ಕಂಠೀರವ ಕ್ರೀಡಾಂಗಣದಲ್ಲಿ ಗೃಹರಕ್ಷಕ ದಳ, ಪೌರರಕ್ಷಣೆ, ಅಗ್ನಿಶಾಮಕ ಸೇವೆ ಮತ್ತು ತುರ್ತು ಸೇವೆಗಳ ನಿರ್ದೇಶನಾಲಯ ಆಯೋಜಿಸಿದ್ದ ರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆ ಮತ್ತು ರ್ಯಾಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತುರ್ತು ಸೇವಾ ಯೋಜನೆಗಳು ಕೇವಲ ರಾಜ್ಯಕ್ಕೆ ಸೀಮಿತವಾಗಬಾರದು. ದೇಶದ ಯಾವುದೇ ಮೂಲೆಯಲ್ಲಿ ಅವಘಡ ಸಂಭವಿಸಿದರೆ ನಾಗರಿಕರ ಸೇವೆ ಸಿದ್ಧರಬೇಕು.

ಅವಘಡಗಳಲ್ಲಿ ಸಾರ್ವಜನಿಕರನ್ನು ರಕ್ಷಿಸುವಂತಹ ಮಹತ್ ಕಾರ್ಯಕ್ಕೆ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.
ರಾಜ್ಯದ ಪೌರರಕ್ಷಣ ದಳಕ್ಕೆ ದೇಶದಲ್ಲಿ ಪ್ರಥಮ ಸ್ಥಾನ ಲಬಿsಸಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿ. ಯುವ ಜನಾಂಗ ಸಾರ್ವಜನಿಕರನ್ನು ರಕ್ಷಿಸುವ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳಬೇಕು. ಜನರ ಕಷ್ಟಕ್ಕೆ ಆಸರೆಯಾಗಬೇಕು. ಯಾವುದೇ ಸಂದರ್ಭದಲ್ಲಿ ಧೃತಿಗೆಡದೆ ಸಾರ್ವಜಕನಿಕರ ಆಸ್ತಿಪಾಸ್ತಿ, ಜೀವ ರಕ್ಷಣೆಗೆ ಮುಂದಾಗಬೇಕು
ಎಂದರು.

ಕಾರ್ಯಕ್ರಮದ ಬಳಿಕ ಅಗ್ನಿಶಾಮಕ ಹಾಗೂ ತುರ್ತು ಸೇವಾ ಘಟಕಗಳು ಬಾಂಬ್ ಸ್ಪೋಟದಂತಹ ಅವಘಡ ಸಂಭವಿಸಿದಾಗ ಉಂಟಾಗುವ ಸನ್ನಿವೇಶಗಳ ಬಗ್ಗೆ ಅಣಕು ಪ್ರದರ್ಶನ ನಡೆಸಿದರು.  ಅಗ್ನಿಶಾಮಕ ದಳದ ವಾಹನಗಳ ಪರಿಚಯ, ಬೆಂಕಿ ನಂದಿಸುವ ವಿಧಾನ, ಯಂತ್ರೋಪಕರಣಗಳ ಬಗ್ಗೆ ಮಾಹಿತಿಗಳನ್ನು ಪ್ರದರ್ಶನ ಮೂಲಕ ತೋರಿಸಲಾಯಿತು. ಅಗ್ನಿಶಾಮಕ ದಳದಲ್ಲಿ ಬಳಸುವ ವಸ್ತುಗಳ ಕುರಿತು ವಸ್ತುಪ್ರದರ್ಶನ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳ, ಸಿಆರ್ ಪಿಎಫ್, ಅಗ್ನಿಶಾಮಕ ಮತ್ತು ತುರ್ತುಸೇವೆಗಳು, ಪೌರರಕ್ಷಣ ದಳ, ಪೊಲೀಸ್ ಹಾಗೂ ಎನ್‍ಸಿಸಿ ಕೆಡೆಟ್‍ಗಳು ಭಾಗವಹಿಸಿದ್ದರು. ಗೃಹಸಚಿವ ಕೆ.ಜೆ. ಜಾರ್ಜ್, ಪೊಲೀಸ್ ಮಹಾ ನಿರ್ದೇಶಕ  ಲಾಲ್ ರುಖುಂ ಪಚಾವೋ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT