ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪ್ರತ್ಯೇಕ ಅಪಘಾತ: ಟೆಕ್ಕಿ ಸೇರಿ ಇಬ್ಬರ ಸಾವು

ನಗರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಟೆಕ್ಕಿ ಸೇರಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯ...

ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಟೆಕ್ಕಿ ಸೇರಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯ ಗೊಂಡಿದ್ದಾರೆ. ಹೊಸೂರು ರಸ್ತೆಯ ಎಲಿ ವೇಟೆಡ್ ಫ್ಲೈ ಓವರ್ ಮೇಲೆ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ.

ಶುಕ್ರವಾರ ಮುಂಜಾನೆ ಘಟನೆ ನಡೆದಿದ್ದು, ದೆಹಲಿ ಮೂಲದ ಸಂದೀಪ್ ಟೋಮರ್(32) ಮೃತರು. ಅವರ ಸ್ನೇಹಿತ ಕೋರಮಂಗಲ ನಿವಾಸಿ ವಿಶಾಲ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂದೀಪ್ ಎಚ್‍ಎಸ್‍ಆರ್ ಲೇಔಟ್‍ನಲ್ಲಿ ವಾಸಿಸುತ್ತಿದ್ದು, ಟೆಕ್ ಮಹೀಂದ್ರ ಕಂಪನಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದರು. ವಿಶಾಲ್ ವಿವಿಪುರದಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಮುಂಜಾನೆ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಲೈಟ್ ಕಂಬಕ್ಕೆ  ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿದ್ದಾನೆ. ಶ್ರೀನಿವಾಸ ಶಿವಾನಂದ (28) ಮೃತರು. ಸುನಿಲ್(30) ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾನಮತ್ತನಾಗಿ ವಾಹನ ಚಾಲನೆ ಮಾಡುತ್ತಿದ್ದುದೇ ಘಟನೆಗೆ ಕಾರಣ. ಈ ಇಬ್ಬರೂ ಸ್ನೇಹಿತರು ಬನಶಂಕರಿಯಲ್ಲಿನ ಈಜುಕೊಳದಲ್ಲಿ ಈಜು ತರಬೇತುದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ರಾತ್ರಿ ಕದಿರೇನಹಳ್ಳಿಯಿಂದ ದೇವೇಗೌಡ ಪೆಟ್ರೋಲ್ ಬಂಕ್ ಕಡೆಗೆ ಸಾಗುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ. ಸುನಿಲ್ ಶಿವಮೊಗ್ಗ ಹಾಗೂ ಮೃತ ಶ್ರೀನಿವಾಸ್ ಕಾರವಾರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT