ಜಿಲ್ಲಾ ಸುದ್ದಿ

ಯದುವೀರ್ ಪಟ್ಟಾಭಿಷೇಕಕ್ಕೆ ಸಿದ್ಧತೆ

Mainashree

ಮೈಸೂರು: ಮೈಸೂರು ರಾಜವಂಶಸ್ಥರ ಕುಟುಂಬದ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆ ಆರಂಭವಾಗಿದ್ದು, ಫೆ.23ರಂದು ಅಂಬಾವಿಲಾಸ ಅರಮನೆಯಲ್ಲಿ ಪಟ್ಟಾಭಿಷೇಕ ನಡೆಯಲಿದೆ ಎಂದು ತಿಳಿದು ಬಂದಿದೆ.

ಪಟ್ಟಾಭಿಷೇಕಕ್ಕಾಗಿ ಅಂಬಾವಿಲಾಸ ಅರಮನೆಯ ಕಲ್ಯಾಣ ಮಂಟಪವನ್ನು ಅಲಂಕರಿಸಲಾಗುತ್ತಿದೆ. ರಾಜ ಕುಟುಂಬ ಹಾಗೂ ಗಣ್ಯರನ್ನು ಪಟ್ಟಾಭಿಷೇಕಕ್ಕೆ ಆಹ್ವಾನಿಸಲು ಸಿದ್ಧತೆ ನಡೆಯುತ್ತಿದೆ.

ಜಯಚಾಮರಾಜ ಒಡೆಯರ್ ಅವರ ಪುತ್ರಿ ಗಾಯತ್ರಿದೇವಿ ಅವರ ಮೊಮ್ಮಗ ಯದುವೀರ್ ಅವರನ್ನು ಮೈಸೂರು ರಾಜವಂಶದ ಉತ್ತರಾಧಿಕಾರಿಯಾಗಿ ನೇಮಿಸುವ ಸಾಧ್ಯತೆ ಇದೆ.

SCROLL FOR NEXT