ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ರಾಘವೇಶ್ವರ ಶ್ರೀಗಳ ಮೇಲ್ಮನವಿ ವಜಾ

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡು­ವಂತೆ ಕೋರಿ ರಾಮಚಂದ್ರಾಪುರ ಮಠದ...

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡು­ವಂತೆ ಕೋರಿ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೈಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಆನಂದ ಭೈರಾರೆಡ್ಡಿ ಮತ್ತು ಎನ್‌. ಆನಂದ್‌ ಅವರ ನೇತೃತ್ವದ ವಿಭಾಗೀಯ ಪೀಠ, ತಾಂತ್ರಿಕ ಕಾರಗಳಿಂದಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಕ್ರಿಮಿನಲ್ ಪ್ರಕರಣದಲ್ಲಿ ರಿಟ್ ಅಥವಾ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

ತಾಂತ್ರಿಕ ಕಾರಣಗಳಿಂದಾಗಿ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ. ಮೇಲ್ಮನವಿ ಸಲ್ಲಿಸಿರುವುದಕ್ಕಾಗಿ ದಂಡ ವಿಧಿಸಬಹುದು. ಆದರೆ, ಸ್ವಾಮೀಜಿಗಳ ಪ್ರಕರಣವಾದ್ದರಿಂದ ದಂಡ ವಿಧಿಸುತ್ತಿಲ್ಲ. ಸ್ವಾಮೀಜಿಗಳ ಬಳಿ ವೈಯಕ್ತಿಕವಾದ ಹಣವಿರುವುದಿಲ್ಲ. ಮಠದ ಆಸ್ತಿಯಿಂದ ದಂಡದ ಮೊತ್ತವನ್ನು ಪಾವತಿ ಮಾಡಬೇಕಾಗುತ್ತದೆ. ಆದ್ದರಿಂದ ಮೇಲ್ಮನವಿ ಸಲ್ಲಿಸಿರುವುದಕ್ಕೆ ದಂಡ ವಿಧಿಸುತ್ತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಲ್ಲದೆ ರಿಟ್ ಅಥವಾ ಮೇಲ್ಮನವಿ ಸಲ್ಲಿಸಲು ಕೂಡ ಅವಕಾಶವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ರಾಮಕಥಾ ಗಾಯಕಿ ಪ್ರೇಮಲತಾ ಮೇಲೆ ಅತ್ಯಾಚಾರ ನಡೆಸಿದ ಆರೋಪವನ್ನು ರಾಘವೇಶ್ವರ ಶ್ರೀಗಳು ಎದುರಿಸುತ್ತಿದ್ದು, ಈ ಪ್ರಕರಣವನ್ನು ರದ್ದುಗೊಳಿಸುವಂತೆ ಶ್ರೀಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾ. ಕೆ.ಎನ್ ಫಣೀಂದ್ರ ಅವರು ಈ ಹಿಂದೆ ವಜಾಗೊಳಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ರಾಘವೇಶ್ವರ ಶ್ರೀಗಳು ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯಿಂದ ಈ ಹಿಂದಿನ ಐವರು ನ್ಯಾಯಮೂರ್ತಿಗಳು ವಿವಿಧ ಕಾರಣಗಳಿಗಾಗಿ ಹಿಂದೆ ಸರಿದಿದ್ದರು.ಹೀಗಾಗಿ ನ್ಯಾಯಾಲಯಲ ಹೊಸ ಪೀಠವನ್ನು ರಚಿಸಿ ವಿಚಾರಣೆಗೆ ಸೂಚನೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT