ಭರತ್ ಹೆಗಡೆ 
ಜಿಲ್ಲಾ ಸುದ್ದಿ

ರಾಮಕೃಷ್ಣ ಹೆಗಡೆ ಪುತ್ರ ಭರತ್ ನಿಧನ

ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಪುತ್ರ ಭರತ್ ಹೆಗಡೆ (60) ಅನಾರೋಗ್ಯದಿಂದ ಗುರುವಾರ ಮೃತಪಟ್ಟಿದ್ದಾರೆ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಪುತ್ರ ಭರತ್ ಹೆಗಡೆ (60) ಅನಾರೋಗ್ಯದಿಂದ ಗುರುವಾರ ಮೃತಪಟ್ಟಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಗುರುವಾರ ಸಾಯಂಕಾಲ 4.30 ಕ್ಕೆ ಮೃತಪಟ್ಟಿದ್ದಾರೆ. ಸಾಮಾಜಿಕ ಕಾರ್ಯಕರ್ತರಾಗಿ ದುಡಿ ಯುತ್ತಿದ್ದ ಭರತ್ ಹೆಗಡೆ ರಾಜಕಾರಣದಿಂದ ದೂರವಿದ್ದರು. ತಮ್ಮ ತಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೂ ಅವರು ರಾಜಕಾರಣದ ಪಡಸಾಲೆ ಯಲ್ಲಿ ಅಷ್ಟಾಗಿ ಕಾಣಿಸಿಕೊಂಡಿರಲಿಲ್ಲ. ಭರತ್ ಹೆಗಡೆ ಅವರಿಗೆ ತಾಯಿ ಶಕುಂತಲಾ ಹೆಗಡೆ, ಸೋದರಿಯರಾದ ಮಮತಾ ಮತ್ತು ಸಮತಾ, ಪತ್ನಿ ಸುನೈನಾ ಮಕ್ಕಳಾದ ಇಶಾ ಮತ್ತು ಅವನೀಶ್ ಇದ್ದಾರೆ.


ಮೃತರ ಪಾರ್ಥಿವ ಶರೀರವನ್ನು ಸದಾಶಿವನಗರದಲ್ಲಿರುವ ಹೆಗಡೆಯವರ ನಿವಾಸ ಕೃತಿಕಾದಲ್ಲಿ ಇಡಲಾಗಿದ್ದು, ಶುಕ್ರವಾರ ಬೆಳಗ್ಗೆ 12 ಗಂಟೆಗೆ ಹೆಬ್ಬಾಳದಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರಗೊಳಿಸಲಾಗುತ್ತದೆ ಎಂದು ಹೆಗಡೆ ಕುಟುಂಬದ ಆಪ್ತ, ಮಾಜಿ ಸಚಿವ ಡಾ. ಎಂ.ಪಿ.ನಾಡಗೌಡ `ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ. ಸಿಎಂ ಭೇಟಿ: ಸುದ್ದಿ ತಿಳಿಯುತ್ತಿದ್ದಂತೆ ರಾಮಕೃಷ್ಣ ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಭರತ್ ಹೆಗಡೆ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಅಗಲಿಕೆಯ ನೋವನ್ನು ಸಹಿಸಿಕೊಳ್ಳುವಂತೆ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಭರತ್ ಹೆಗಡೆ ಸಾವಿಗೆ ಉನ್ನತಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಭರತ್ ಬಗ್ಗೆ ಬಾಲ್ಯದಿಂದಲೂ ನಾನು ಬಲ್ಲೆ. ತಂದೆ ಮುಖ್ಯಮಂತ್ರಿಯಾಗಿದ್ದರೂ ಯಾವುದೇ ದರ್ಪ ಮತ್ತು ಪ್ರಭಾವ ಪ್ರದರ್ಶನ ಮಾಡದ ಭರತ್ ರಾಜಕಾರಣದಿಂದ ದೂರವೇ ಉಳಿದಿದ್ದರು. ಅವರ ಅಗಲಿಕೆಯಿಂದ ಉತ್ತಮ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ. ಮಾಜಿ ಸಚಿವಎಂ.ಸಿ.ನಾಣಯ್ಯ ಅವರೂ ಭರತ್ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.


ರಾಜಕಾರಣದಿಂದ ದೂರ
ತಂದೆ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೂ ಭರತ್ ಹೆಗಡೆ ರಾಜಕಾರಣಕ್ಕೆ ಪ್ರವೇಶಿಸಿರಲಿಲ್ಲ. ಕುಟುಂಬ ರಾಜಕಾರಣ ಸಲ್ಲ ಎಂಬ ಹೆಗಡೆಯವರ ವಾದಕ್ಕೆ ಭರತ್ ಪೂರಕವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರು ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕೆಲ ವರ್ಷದ ಹಿಂದೆ ಅವರು ಸಕ್ರಿಯ
ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಾರೆ. ರಾಷ್ಟ್ರೀಯ ಪಕ್ಷಕ್ಕೆ ಸೇರುತ್ತಾರೆಂಬ ಸುದ್ದಿಗಳು ಇದ್ದರೂ ಅದು ನಿಜವಾಗಲಿಲ್ಲ. ಆ ಮಟ್ಟಿಗೆ ಭರತ್ ತಂದೆಯ ಆದರ್ಶವನ್ನು ಕೊನೆಯವರೆಗೆ ಪಾಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಸಂಸತ್ ನಲ್ಲಿ ಕೋಲಾಹಲ

ಭಾರತದ ಕನಸುಗಳಿಗೆ ಇಂಧನ: ಬಾಹ್ಯಾಕಾಶ ಜಿಗಿತಕ್ಕೆ 13,700 ಕೋಟಿ (ಜಾಗತಿಕ ಜಗಲಿ)

ಭಾರತದ ಮೇಲೆ ಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

'ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ': ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ, BJP ಕಿಡಿ!

SCROLL FOR NEXT