ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ 
ಜಿಲ್ಲಾ ಸುದ್ದಿ

ಉಮಾಶ್ರೀ ಭರವಸೆ, ಪ್ರತಿಭಟನೆ ಹಿಂದಕ್ಕೆ

ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ಬಿಸಿ ವಿಧಾನಸೌಧಕ್ಕೆ ತಟ್ಟುತ್ತಿದ್ದಂತೆ ಸಂಜೆ 6.30ಕ್ಕೆ...

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ಬಿಸಿ ವಿಧಾನಸೌಧಕ್ಕೆ ತಟ್ಟುತ್ತಿದ್ದಂತೆ ಸಂಜೆ 6.30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಸ್ಥಳಕ್ಕೆ ದೌಡಾಯಿಸಿದರು.

 ಪ್ರತಿಭಟನಾನಿರತರ ಜತೆ ಮಾತುಕತೆ ನಡೆಸಿದ ಅವರು, ಸದ್ಯಕ್ಕೆ 2 ಬೇಡಿಕೆಗಳನ್ನು ಈಡೇರಿಸಿ, ಉಳಿದ ಬೇಡಿಕೆಗಳನ್ನು ಪರಿಶೀಲಿಸಿ ಹಂತಹಂತವಾಗಿ ಈಡೇರಿಸುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲು ಕಾರ್ಯಕರ್ತೆಯರು ಒಪ್ಪಿದರು. ಅಂಗನವಾಡಿಗಳನ್ನು ಖಾಸಗೀಕರಣ ಮಾಡುವ ಉದ್ದೇಶ ಕೈಬಿಡಲಾಗುತ್ತದೆ. ಮುಂಬರುವ ಬಜೆಟ್‍ನಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ರು. 1 ಸಾವಿರಕ್ಕೆ ಹೆಚ್ಚಿಸುವುದಾಗಿ ಉಮಾಶ್ರೀ ಭರವಸೆ ಕೊಟ್ಟಿದ್ದಾರೆ.

ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟನೆ ಕೈಗೊಂಡಿದ್ದಕ್ಕೆ ನೀಡಲಾಗಿದ್ದ ನೋಟಿಸ್ ಹಿಂಪಡೆಯಲಾಗುವುದು. ಮುಷ್ಕರ ವೇಳೆ ಕೆಲಸ ಮಾಡಿರದಿದ್ದರೂ 11 ದಿನಗಳ ಗೌರವಧನ ನೀಡಲಾಗುವುದು. ಪಿಂಚಣಿ ನೀಡುವ ಸಂಬಂಧ ಮುಂದಿನ ದಿನದಲ್ಲಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಕಾರ್ಯಕರ್ತೆಯರಿಗೆ ರು. 5,500 ಹಾಗೂ ಸಹಾಯಕಿಯರಿಗೆ ರು. 2,750 ಗೌರವಧನ ನೀಡಲಾಗುತ್ತಿದೆ. ಗೌರವಧನ ಹೆಚ್ಚಳ ಮಾಡದಿದ್ದರೆ ಮತ್ತೆ ಪ್ರತಿಭಟನೆಗೆ ಇಳಿಯುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಹಿತರಕ್ಷಣಾ ಸಮಿತಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT