ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ 
ಜಿಲ್ಲಾ ಸುದ್ದಿ

ಉಮಾಶ್ರೀ ಭರವಸೆ, ಪ್ರತಿಭಟನೆ ಹಿಂದಕ್ಕೆ

ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ಬಿಸಿ ವಿಧಾನಸೌಧಕ್ಕೆ ತಟ್ಟುತ್ತಿದ್ದಂತೆ ಸಂಜೆ 6.30ಕ್ಕೆ...

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ಬಿಸಿ ವಿಧಾನಸೌಧಕ್ಕೆ ತಟ್ಟುತ್ತಿದ್ದಂತೆ ಸಂಜೆ 6.30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಸ್ಥಳಕ್ಕೆ ದೌಡಾಯಿಸಿದರು.

 ಪ್ರತಿಭಟನಾನಿರತರ ಜತೆ ಮಾತುಕತೆ ನಡೆಸಿದ ಅವರು, ಸದ್ಯಕ್ಕೆ 2 ಬೇಡಿಕೆಗಳನ್ನು ಈಡೇರಿಸಿ, ಉಳಿದ ಬೇಡಿಕೆಗಳನ್ನು ಪರಿಶೀಲಿಸಿ ಹಂತಹಂತವಾಗಿ ಈಡೇರಿಸುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲು ಕಾರ್ಯಕರ್ತೆಯರು ಒಪ್ಪಿದರು. ಅಂಗನವಾಡಿಗಳನ್ನು ಖಾಸಗೀಕರಣ ಮಾಡುವ ಉದ್ದೇಶ ಕೈಬಿಡಲಾಗುತ್ತದೆ. ಮುಂಬರುವ ಬಜೆಟ್‍ನಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ರು. 1 ಸಾವಿರಕ್ಕೆ ಹೆಚ್ಚಿಸುವುದಾಗಿ ಉಮಾಶ್ರೀ ಭರವಸೆ ಕೊಟ್ಟಿದ್ದಾರೆ.

ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟನೆ ಕೈಗೊಂಡಿದ್ದಕ್ಕೆ ನೀಡಲಾಗಿದ್ದ ನೋಟಿಸ್ ಹಿಂಪಡೆಯಲಾಗುವುದು. ಮುಷ್ಕರ ವೇಳೆ ಕೆಲಸ ಮಾಡಿರದಿದ್ದರೂ 11 ದಿನಗಳ ಗೌರವಧನ ನೀಡಲಾಗುವುದು. ಪಿಂಚಣಿ ನೀಡುವ ಸಂಬಂಧ ಮುಂದಿನ ದಿನದಲ್ಲಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಕಾರ್ಯಕರ್ತೆಯರಿಗೆ ರು. 5,500 ಹಾಗೂ ಸಹಾಯಕಿಯರಿಗೆ ರು. 2,750 ಗೌರವಧನ ನೀಡಲಾಗುತ್ತಿದೆ. ಗೌರವಧನ ಹೆಚ್ಚಳ ಮಾಡದಿದ್ದರೆ ಮತ್ತೆ ಪ್ರತಿಭಟನೆಗೆ ಇಳಿಯುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಹಿತರಕ್ಷಣಾ ಸಮಿತಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

ನೀಟ್ ಮರುಪರೀಕ್ಷಾ ಪತ್ರಿಕೆಗಳನ್ನು ಸಾಗಿಸಲು IAF ನೆರವು ಪಡೆಯಲು ಸರ್ಕಾರ ಮುಂದು!

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿಗೆ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?

SCROLL FOR NEXT