ಬೆಂಗಳೂರು: ಜಿಲ್ಲಾಡಳಿತದಿಂದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಶುಕ್ರವಾರ ರು. 67.50 ಕೋಟಿ ಮೌಲ್ಯದ 39.30 ಎಕರೆ ಭೂ ಒತ್ತುವರಿ ತೆರವುಗೊಳಿಸಲಾಗಿದೆ.
ಉತ್ತರ ತಾಲೂಕು, ಯಲಹಂಕ ಹೋಬಳಿ, ಸಿಂಗಾಪುರ ಗ್ರಾಮದಲ್ಲಿ ಅಂದಾಜು ರು. 11.50 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ವಶಪಡಿಸಿಕೊಂಡಿದೆ. ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ, ಕೆ.ಗೊಲ್ಲಹಳ್ಳಿ ಗ್ರಾಮದಲ್ಲಿ ರು. 1 ಕೋಟಿ ಮೌಲ್ಯದ ಭೂಮಿ, ಪೂರ್ವ ತಾಲೂಕು, ಬಿದರಹಳ್ಳಿ ಹೋಬಳಿ, ಪಟ್ಟಂದೂರು ಅಗ್ರಹಾರ ಗ್ರಾಮ, ಬಿದರಹಳ್ಳಿ ಹೋಬಳಿ, ಬೊಮ್ಮನಹಳ್ಳಿ, ಮಾರಗೊಂಡನಹಳ್ಳಿ ಗ್ರಾಮದಲ್ಲಿ ಅಂದಾಜು ರು. 35 ಕೋಟಿ ಮೌಲ್ಯದ ಮತ್ತು ಆನೇಕಲ್ ತಾಲೂಕು, ಸರ್ಜಾಪುರ ಹೋಬಳಿ, ಸೋಮಪುರ, ಕೊಡಲಿಪುರ ಗ್ರಾಮದ ರು. 20 ಕೋಟಿ ಮೌಲ್ಯದ ಜಾಗಗಳನ್ನು ತೆರವುಗೊಳಿಸಲಾಯಿತು. ಅಪರ ಜಿಲ್ಲಾಧಿಕಾರಿ ಆರ್. ವೆಂಕಟಾಚಲಪತಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.