ಜಿಲ್ಲಾ ಸುದ್ದಿ

ಹಾಲೋಬ್ರಿಕ್ಸ್ ಬಿದ್ದು ಕಾರ್ಮಿಕ ಸಾವು

ತಲೆ ಮೇಲೆ ಆಕಸ್ಮಿಕವಾಗಿ ಹಾಲೋಬ್ರಿಕ್ಸ್ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಕಮ್ಮನಹಳ್ಳಿಯ ಸೇಂಟ್...

ಬೆಂಗಳೂರು: ತಲೆ ಮೇಲೆ ಆಕಸ್ಮಿಕವಾಗಿ ಹಾಲೋಬ್ರಿಕ್ಸ್ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಕಮ್ಮನಹಳ್ಳಿಯ ಸೇಂಟ್ ಚಾರ್ಲ್ಸ್ ಶಾಲೆ ಆವರಣದ ನಿರ್ಮಾಣದ ಹಂತದ ಕಟ್ಟಡದಲ್ಲಿ ನಡೆದಿದೆ.

ಬಳ್ಳಾರಿ ಮೂಲದ ಸರವಣ(26) ಮೃತರು. 5ನೇ ಮಹಡಿ ಕಟ್ಟಡದಲ್ಲಿ ಇತರ ಕಾರ್ಮಿಕರೊಂದಿಗೆ ಕಳೆದ ಮೂರು ತಿಂಗಳಿಂದ ಸರವಣ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ಸರವಣ ನೆಲ ಮಹಡಿ ಯಲ್ಲಿ ಹಾಲೋಬ್ರಿಕ್ಸ್ ಗಳನ್ನು ಲೋಡ್ ಮಾಡಿ 5ನೇ ಮಹಡಿಗೆ ಯಂತ್ರದ ಮೂಲಕ ಕಳುಹಿಸುತ್ತಿದ್ದರು.

ಮೇಲಿನ ಮಹಡಿಯಲ್ಲಿ ಅದನ್ನು ಮತ್ತೊಬ್ಬ ಕಾರ್ಮಿಕ ಅನ್‍ಲೋಡ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಒಂದು ಹಾಲೋಬ್ರಿಕ್ಸ್ ಜಾರಿ ಸರವಣನ ತಲೆ ಮೇಲೆ ಬಿದ್ದಿದೆ. ರಕ್ತಸ್ರಾವವಾಗಿ ಕುಸಿದು ಬಿದ್ದ ಸರವಣ ಅವರನ್ನು ಆಸ್ಪತ್ರೆಗೆ ಕರೆದೊಯ್ದಿ ದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT