ಜಿಲ್ಲಾ ಸುದ್ದಿ

ಹಣ ವಸೂಲಿ: ನಾಲ್ವರು ಮಂಗಳಮುಖಿ ಸೆರೆ

ದಾರಿಹೋಕರನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಮಂಗಳಮುಖಿ ಯರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ದಾರಿಹೋಕರನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಮಂಗಳಮುಖಿಯರನ್ನು ವಿಜಯನಗರಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಪೂಜಿನಗರ ನಿವಾಸಿಗಳಾದ ಪ್ರಿಯಾ, ಅವಿಷ್ಕ, ಸ್ನೇಹ, ಭುವನ ಬಂಧಿತರು. ಆರೋಪಿಗಳು ಹಣ ಇರುವ ಅಥವಾ ಶ್ರೀಮಂತ ವ್ಯಕ್ತಿಗಳನ್ನು ಕಂಡ ತಕ್ಷಣ ಅವರ ಬಳಿ ಹೋಗಿ ವಿಚಿತ್ರವಾಗಿ ವರ್ತಿಸುತ್ತಿದ್ದರು. ಬಲವಂತವಾಗಿ ಅವರ ಕೈಗಳನ್ನು ಇಬ್ಬರು ಹಿಡಿದು ಉಳಿದಿಬ್ಬರು ತಾವೇ ಶರ್ಟ್ ಮತ್ತು ಪ್ಯಾಂಟ್ ಜೇಬಿಗೆ ಕೈ ಹಾಕಿ ಇರುವ ಹಣ, ಆಭರಣ ದೋಚುತ್ತಿದ್ದರು.

ಜನವರಿ 24ರಂದು ಬಸವರಾಜು ಎಂಬುವರನ್ನು ಅಡ್ಡಗಟ್ಟಿ ಹಣ ನೀಡುವಂತೆ ಕೇಳಿದ್ದಾರೆ. ಚಿಲ್ಲರೆ ಇಲ್ಲ ಎಂದು ಅವರು ನಿರಾಕರಿಸಿದ ಕಾರಣ, ಚಿಲ್ಲರೆ ಕೊಡುವ ನೆಪದಲ್ಲಿ ರು.50 ಪಡೆದು ನಂತರ ಬಲವಂತವಾಗಿ ಜೇಬಿನಲ್ಲಿದ್ದ ಸಾವಿರಾರು ರುಪಾಯಿ ಹಣ ದೋಚಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವಿಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಆರೋಪಿಗಳು ನಗರದ ಹಲವೆಡೆ ಈ ರೀತಿ ಬಲವಂತವಾಗಿ ಸುಲಿಗೆ ಮಾಡಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT