ಜಿಲ್ಲಾ ಸುದ್ದಿ

ಹಣ ವಸೂಲಿ: ನಾಲ್ವರು ಮಂಗಳಮುಖಿ ಸೆರೆ

ದಾರಿಹೋಕರನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಮಂಗಳಮುಖಿ ಯರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ದಾರಿಹೋಕರನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಮಂಗಳಮುಖಿಯರನ್ನು ವಿಜಯನಗರಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಪೂಜಿನಗರ ನಿವಾಸಿಗಳಾದ ಪ್ರಿಯಾ, ಅವಿಷ್ಕ, ಸ್ನೇಹ, ಭುವನ ಬಂಧಿತರು. ಆರೋಪಿಗಳು ಹಣ ಇರುವ ಅಥವಾ ಶ್ರೀಮಂತ ವ್ಯಕ್ತಿಗಳನ್ನು ಕಂಡ ತಕ್ಷಣ ಅವರ ಬಳಿ ಹೋಗಿ ವಿಚಿತ್ರವಾಗಿ ವರ್ತಿಸುತ್ತಿದ್ದರು. ಬಲವಂತವಾಗಿ ಅವರ ಕೈಗಳನ್ನು ಇಬ್ಬರು ಹಿಡಿದು ಉಳಿದಿಬ್ಬರು ತಾವೇ ಶರ್ಟ್ ಮತ್ತು ಪ್ಯಾಂಟ್ ಜೇಬಿಗೆ ಕೈ ಹಾಕಿ ಇರುವ ಹಣ, ಆಭರಣ ದೋಚುತ್ತಿದ್ದರು.

ಜನವರಿ 24ರಂದು ಬಸವರಾಜು ಎಂಬುವರನ್ನು ಅಡ್ಡಗಟ್ಟಿ ಹಣ ನೀಡುವಂತೆ ಕೇಳಿದ್ದಾರೆ. ಚಿಲ್ಲರೆ ಇಲ್ಲ ಎಂದು ಅವರು ನಿರಾಕರಿಸಿದ ಕಾರಣ, ಚಿಲ್ಲರೆ ಕೊಡುವ ನೆಪದಲ್ಲಿ ರು.50 ಪಡೆದು ನಂತರ ಬಲವಂತವಾಗಿ ಜೇಬಿನಲ್ಲಿದ್ದ ಸಾವಿರಾರು ರುಪಾಯಿ ಹಣ ದೋಚಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವಿಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಆರೋಪಿಗಳು ನಗರದ ಹಲವೆಡೆ ಈ ರೀತಿ ಬಲವಂತವಾಗಿ ಸುಲಿಗೆ ಮಾಡಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT