ರಕ್ಷಣಾ ರಾಜ್ಯ ಸಚಿವ ರಾವ್ ಇಂದ್ರಜೀತ್ ಸಿಂಗ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ರಕ್ಷಣೆಯಲ್ಲಿ ಮೇಕ್ ಇನ್ ಇಂಡಿಯಾ ಯಶಸ್ವಿಗೆ ಸ್ವಾವಲಂಬನೆ ಅಗತ್ಯ

ಮೇಕ್ ಇನ್ ಇಂಡಿಯಾ ಯೋಜನೆಯ ಯಶಸ್ವಿ ಹಿಂದೆ ರಕ್ಷಣಾ ಸಾಮಗ್ರಿಗಳ ಸ್ವಾವಲಂಬನೆ ನಿಂತಿದೆ ಎಂದು ರಕ್ಷಣಾ ರಾಜ್ಯ ಸಚಿವ ರಾವ್ ಇಂದ್ರಜೀತ್ ಸಿಂಗ್ ಹೇಳಿದ್ದಾರೆ..

ಬೆಂಗಳೂರು: ಮೇಕ್ ಇನ್ ಇಂಡಿಯಾ ಯೋಜನೆಯ ಯಶಸ್ವಿ ಹಿಂದೆ ರಕ್ಷಣಾ ಸಾಮಗ್ರಿಗಳ ಸ್ವಾವಲಂಬನೆ ನಿಂತಿದೆ ಎಂದು ರಕ್ಷಣಾ ರಾಜ್ಯ ಸಚಿವ ರಾವ್ ಇಂದ್ರಜೀತ್ ಸಿಂಗ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯ ಮಹಾತ್ವಾಕಾಂಕ್ಷಿ `ಮೇಕ್ ಇನ್ ಇಂಡಿಯಾ' ಯೋಜನೆ ಸಿಂಹಪಾಲು ರಕ್ಷಣಾ ವಿಭಾಗದ್ದಾಗಿದೆ. ಭಾರತದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ರಕ್ಷಣಾ ಸಾಮಗ್ರಿಗಳ ಆಮದು ನಿಯಂತ್ರಿಸಬೇಕಿದೆ. ಹೀಗಾಗಿ ಮುಂದಿನ ಬಜೆಟ್ ಹಾಗೂ ನಂತರದ ಅಧಿವೇಶನದಲ್ಲಿ ಈ ಸಂಬಂಧ ನೀತಿಗಳನ್ನು ನಿರೀಕ್ಷಿಸಬಹುದಾಗಿದೆ ಹಾಗೂ ರಕ್ಷಣಾ
ಸಾಮಗ್ರಿಗಳ ಉತ್ಪಾದನೆ ಕುರಿತ ನಿಯಮದಲ್ಲೂ ಬದಲಾವಣೆ ತರಲಾಗುವುದು ಎಂದು ಏರೋ ಇಂಡಿಯಾ-2015ರ ನಿಮಿತ್ತ ಡಿಆರ್‍ಡಿಒ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಅಭಿಪ್ರಾಯಪಟ್ಟರು.

ಭಾರತದಲ್ಲಿ ಬಂಡವಾಳ ಹೂಡಬಹುದಾದಂತಹ 200ಕ್ಕೂ ಅಧಿಕ ಕಂಪನಿಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಬಂಡವಾಳ ಹೂಡಿಕೆಗೆ ಆಕರ್ಷಿಸಿ ಸ್ಥಳೀಯ ಬೇಡಿಕೆ ಈಡೇರಿಸಿ ರಫ್ತು ಮಾಡುವಂತಾಗಬೇಕು. ರಕ್ಷಣಾವಲಯಕ್ಕೆ ಸಂಬಂಧಿಸಿ ಒಂದೆರಡು ವರ್ಷಗಳಲ್ಲಿ ಜಾದು ಮಾಡಲು ಸಾಧ್ಯವಿಲ್ಲ. ಇಂತಹ ದೂರಗಾಮಿ ಯೋಜನೆಯ ಯಶಸ್ವಿಗೆ ಒಂದು ದಶಕಕ್ಕೂ ಅಧಿಕ ಸಮಯ ಬೇಕಾಗುತ್ತದೆ. ಆದರೆ, ಈ ನಿಟ್ಟಿನಲ್ಲಿ ಈಗಿನಂದಲೇ ಪ್ರಾಮಾಣಿಕ ಪ್ರಯತ್ನ ನಡೆಯಬೇಕು. ಕೇಂದ್ರ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ರಾವ್ ತಿಳಿಸಿದರು.

ಕೇಂದ್ರ ಸರ್ಕಾರಿ ಸ್ವಾಮ್ಯದ ಸಾಕಷ್ಟು ಕಂಪನಿಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ಆದರೆ ಸೇನೆ, ರಕ್ಷಣಾ ಇಲಾಖೆ ಹಾಗೂ ರಕ್ಷಣಾ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಆ ಮೂಲಕ ಹೆಚ್ಚುವರಿ ಆರ್ಥಿಕ ಹೊರೆ ಇಳಿಸಬಹುದು, ನಿಗದಿತ ಸಮಯದಲ್ಲಿ ಯೋಜನೆ ಮುಗಿಸಬಹುದು ಎಂದು ಅವರು ಹೇಳಿದರು. ಮೇಕ್ ಇನ್ ಇಂಡಿಯಾ ಯೋಜನೆ ಯಶಸ್ವಿಯಾಗಬೇಕಾದರೆ ರಕ್ಷಣಾ ಸಾಮಾಗ್ರಿಗಳ ಸಂಶೋಧನೆ ಹಾಗೂ ವಿನ್ಯಾಸವೂ ಭಾರತದಲ್ಲಿಯೇ ಆಗಬೇಕು.

ಆದ್ದರಿಂದ ಪರವಾನಗಿ ಹಾಗೂ ಪೇಟೆಂಟ್ ಸಮಸ್ಯೆ ಇರುವುದಿಲ್ಲ. ಜತೆಗೆ ಭಾರತ ಸುಲಭವಾಗಿ ರಕ್ಷಣಾ ಸಾಮಗ್ರಿಗಳ ಉತ್ಪಾದನೆ ಹಾಗೂ ರಫ್ತು ಮಾಡಬಹುದು. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ನೀತಿ ರೂಪಿಸಲಿದೆ, ಜತೆಗೆ ಡಿಆರ್ ಡಿಒ ನೆರವನ್ನು ಖಾಸಗಿ ಕಂಪನಿಗಳು ಪಡೆಯುವ ಬಗ್ಗೆ ಸ್ಪಷ್ಟ ನಿಲುವು ತಿಳಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

BJPಗೊಂದು ಅವಕಾಶ ಕೊಡಿ, ಭ್ರಷ್ಟಾಚಾರ-ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಬಂಗಾಳ ಜನತೆಗೆ ಅಮಿತ್ ಶಾ ಮನವಿ

Bengaluru: 'ಧ್ರುವ್ ಎನ್‌ಜಿ' ಹೆಲಿಕಾಪ್ಟರ್‌ಗೆ ಹಸಿರು ನಿಶಾನೆ ತೋರಿದ Ram Mohan Naidu

ಕೋಗಿಲು ಮನೆಗಳ ತೆರವು ಕೇಸ್​ಗೆ ಟ್ವಿಸ್ಟ್: 2016ರ ಮೊದಲು ಇಲ್ಲಿ ಮನೆಗಳೇ ಇರಲಿಲ್ಲ, ನಿವಾಸಿಗಳ ಆರೋಪಕ್ಕೆ ಸ್ಯಾಟಲೈಟ್ ಫೋಟೋ ಮೂಲಕ GBA ತಿರುಗೇಟು..!

Kogilu layout Demolition: ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು; ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ; ಹಲವೆಡೆ ವಾಹನ ಸಂಚಾರ ನಿರ್ಬಂಧ

SCROLL FOR NEXT