ಜಿಲ್ಲಾ ಸುದ್ದಿ

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Mainashree

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ಎಸಿಎಸ್ ಬಡವಾಣೆಯಲ್ಲಿ ವೆಂಕಟಶಿವರೆಡ್ಡಿ(30) ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈಯ್ಯಲಾಗಿದೆ.

ಕೋಲಾರ ಮೂಲದ ವೆಂಕಟಶಿವರೆಡ್ಡಿ ಕೆಲಸದ ಮೇಲೆ ಬೆಂಗಳೂರಿಗೆ ಬಂದಿದ್ದರು. ಮಂಗಳವಾರ ರಾತ್ರಿ ಎಸಿಎಸ್ ಬಡವಾಣೆಯಲ್ಲಿ ಹೋಗುತ್ತಿದ್ದಾಗ ನಾಲ್ವರು ದುಷ್ಕರ್ಮಿಗಳು ಬೈಕ್‌ನಲ್ಲಿ ಆಗಮಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

SCROLL FOR NEXT