ಗೃಹ ಸಚಿವ ಜಾರ್ಜ್ 
ಜಿಲ್ಲಾ ಸುದ್ದಿ

ಒವೈಸಿಗೆ ನಿರ್ಬಂಧ: ಗೃಹ ಸಚಿವ ಜಾರ್ಜ್ ಸಮರ್ಥನೆ

ಎಐಎಂಐಎ ಮುಖಂಡ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ಹೇರಿರುವುದನ್ನು...

ಬೆಂಗಳೂರು: ಎಐಎಂಐಎ ಮುಖಂಡ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ಹೇರಿರುವುದನ್ನು ಗೃಹ ಸಚಿವ ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ.

ಶಾಂತಿ, ಸುವ್ಯವಸ್ಥೆಯ ಸಲುವಾಗಿ ಅಸಾದುದ್ದೀನ್ ಒವೈಸಿ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ಹೇರಿದೆ. ಆದರೆ, ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ನಗರ ಪೊಲೀಸರು ತೆಗೆದುಕೊಂಡ ಕ್ರಮದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ.

ಶಿವಾಜಿನಗರದ ಛೋಟಾ ಮೈದಾನದ್ಲಲಿ ಫೆ.21ರಂದು ನಡೆಯಲಿರುವ ಎಂಐಎಂ ಸಮಾವೇಶದಲ್ಲಿ ಭಾಗವಹಿಸಲು ಹೈದ್ರಾಬಾದ್ ಸಂಸದ ಅಸಾದುದ್ದೀನ್ ಒವೈಸಿಗೆ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಆದೇಶಿಸಿದ್ದರು.

ಫೆ.9ರಿಂದ 25ವರೆಗೆ ಅಸಾದುದ್ದೀನ್ ಒವೈಸಿ ಬೆಂಗಳೂರು ಪ್ರವೇಶಿಸುವಂತಿಲ್ಲ. ಪ್ರಚೋದನಕಾರಿ ಭಾಷಣ ಹಿನ್ನೆಲೆ ಹೊಂದಿರುವ ಒವೈಸಿ ವಿರುದ್ಧ ಹೈದ್ರಾದಾಬ್ ಮತ್ತು ಮಹಾರಾಷ್ಟ್ರದಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಪ್ರಚೋದನಾಕಾರಿ ಭಾಷಣ ಹಾಗೂ ಹೇಳಿಕೆಯಿಂದಾಗಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ನಿಷೇಧ ವಿಧಿಸಲಾಗಿದೆ. ಇಂದು ಮಧ್ಯಾಹ್ನ 3ರಿಂದ 6ರವರೆಗೆ ಎಂಐಎಂ ಪಕ್ಷದ ಸಮಾವೇಶ ನಡೆಸಲು ಅನುಮತಿ ನೀಡಲಾಗಿದೆ.

ವಿಡಿಯೋ, ಆಡಿಯೋ ಸೇರಿದಂತೆ ಎಲ್ಲ ರೀತಿಯ ಭಾಷಣ ಪ್ರಸಾರ ನಿರ್ಬಂಧಿಸಲಾಗಿದೆ. ಷರತ್ತು ಉಲ್ಲಂಘಿಸಿದರೆ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!