ವಿನಯ ಸುವರ್ಣ ಅವರ ಚಿತ್ರಕಲಾ ಪ್ರದರ್ಶನ 
ಜಿಲ್ಲಾ ಸುದ್ದಿ

ಅನುಭವದ ಮೂಲಕ ಕಲಿಯುವ ವಿದ್ಯೆ ಶ್ರೇಷ್ಠ

ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪಡೆಯುವುದಕ್ಕಿಂತ ಅನುಭವದ ಮೂಲಕ ಕಲಿಯುವ ವಿದ್ಯೆ ಶ್ರೇಷ್ಠವಾದುದು ಎಂದು ಚಿತ್ರಕಲಾ..

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪಡೆಯುವುದಕ್ಕಿಂತ ಅನುಭವದ ಮೂಲಕ ಕಲಿಯುವ ವಿದ್ಯೆ ಶ್ರೇಷ್ಠವಾದುದು ಎಂದು ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ.ಬಿ.ಎಲ್.ಶಂಕರ್ ಅಭಿಪ್ರಾಯಪಟ್ಟರು.

ವೆಂಕಟಪ್ಪ ಚಿತ್ರಕಲಾ ಶಾಲೆಯಲ್ಲಿ ಕಲಾವಿದೆ ವಿನಯ ಸುವರ್ಣ ಅವರ ಚಿತ್ರಕಲಾ ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರಕಲೆ, ಸಂಗೀತ, ಸಾಹಿತ್ಯ ಸೇರಿದಂತೆ ಕಲೆಗಳು ಅನುಭವದ ಮೂಲಕ ಒಲಿಯುತ್ತದೆ.

ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಪಡೆದ ಕಲೆಯ ಶಿಕ್ಷಣಕ್ಕಿಂತಲೂ ಸ್ವಂತ ಅನುಭವದ ಮೂಲಕ ಕಲಿಯುವ ಪ್ರಕ್ರಿಯೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ತಪಸ್ಸಿನ ಮಾದರಿಯಲ್ಲಿ ಶ್ರಮಪಟ್ಟರೆ ಮಾತ್ರ ಕಲೆಯಲ್ಲಿ ಪರಿಪೂರ್ಣತೆ ಸಾಧಿಸಬಹುದು. ಅನುಭವದ ಕಲಿಕೆಯಲ್ಲಿ ಮುಂಚೂಣಿಗೆ ಬರುವವರು ವಿನಯಶೀಲ ಹಾಗೂ ಪ್ರಾಮಾಣಿಕರಾಗಿರುತ್ತಾರೆ ಎಂದರು.

ಶೇಷಾದ್ರಿಪುರ ಕಾಲೇಜು ದತ್ತಿಯ ಗೌರವ ಕಾರ್ಯದರ್ಶಿ ವೂಡೆ ಪಿ.ಕೃಷ್ಣ, ಕೃಷ್ಣಪ್ಪ ಸುವರ್ಣ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT