ವಿನಯ ಸುವರ್ಣ ಅವರ ಚಿತ್ರಕಲಾ ಪ್ರದರ್ಶನ 
ಜಿಲ್ಲಾ ಸುದ್ದಿ

ಅನುಭವದ ಮೂಲಕ ಕಲಿಯುವ ವಿದ್ಯೆ ಶ್ರೇಷ್ಠ

ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪಡೆಯುವುದಕ್ಕಿಂತ ಅನುಭವದ ಮೂಲಕ ಕಲಿಯುವ ವಿದ್ಯೆ ಶ್ರೇಷ್ಠವಾದುದು ಎಂದು ಚಿತ್ರಕಲಾ..

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪಡೆಯುವುದಕ್ಕಿಂತ ಅನುಭವದ ಮೂಲಕ ಕಲಿಯುವ ವಿದ್ಯೆ ಶ್ರೇಷ್ಠವಾದುದು ಎಂದು ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ.ಬಿ.ಎಲ್.ಶಂಕರ್ ಅಭಿಪ್ರಾಯಪಟ್ಟರು.

ವೆಂಕಟಪ್ಪ ಚಿತ್ರಕಲಾ ಶಾಲೆಯಲ್ಲಿ ಕಲಾವಿದೆ ವಿನಯ ಸುವರ್ಣ ಅವರ ಚಿತ್ರಕಲಾ ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರಕಲೆ, ಸಂಗೀತ, ಸಾಹಿತ್ಯ ಸೇರಿದಂತೆ ಕಲೆಗಳು ಅನುಭವದ ಮೂಲಕ ಒಲಿಯುತ್ತದೆ.

ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಪಡೆದ ಕಲೆಯ ಶಿಕ್ಷಣಕ್ಕಿಂತಲೂ ಸ್ವಂತ ಅನುಭವದ ಮೂಲಕ ಕಲಿಯುವ ಪ್ರಕ್ರಿಯೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ತಪಸ್ಸಿನ ಮಾದರಿಯಲ್ಲಿ ಶ್ರಮಪಟ್ಟರೆ ಮಾತ್ರ ಕಲೆಯಲ್ಲಿ ಪರಿಪೂರ್ಣತೆ ಸಾಧಿಸಬಹುದು. ಅನುಭವದ ಕಲಿಕೆಯಲ್ಲಿ ಮುಂಚೂಣಿಗೆ ಬರುವವರು ವಿನಯಶೀಲ ಹಾಗೂ ಪ್ರಾಮಾಣಿಕರಾಗಿರುತ್ತಾರೆ ಎಂದರು.

ಶೇಷಾದ್ರಿಪುರ ಕಾಲೇಜು ದತ್ತಿಯ ಗೌರವ ಕಾರ್ಯದರ್ಶಿ ವೂಡೆ ಪಿ.ಕೃಷ್ಣ, ಕೃಷ್ಣಪ್ಪ ಸುವರ್ಣ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT