ಜಿಲ್ಲಾ ಸುದ್ದಿ

ರು70 ಕೋಟಿ ಮೌಲ್ಯದ ಭೂ ಒತ್ತುವರಿ ತೆರವು

ಭೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಜಿಲ್ಲಾಡಳಿತ ಶನಿವಾರ ರು.70 ಕೋಟಿ ಮೌಲ್ಯದ 31.10 ಎಕರೆ ಭೂ ಒತ್ತುವರಿ ತೆರವು ಮಾಡಿದೆ...

ಬೆಂಗಳೂರು: ಭೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಜಿಲ್ಲಾಡಳಿತ ಶನಿವಾರ ರು.70 ಕೋಟಿ ಮೌಲ್ಯದ 31.10 ಎಕರೆ ಭೂ ಒತ್ತುವರಿ ತೆರವು ಮಾಡಿದೆ.

ಉತ್ತರ ತಾಲೂಕು, ದಾಸನಪುರ ಹೋಬಳಿ ಬೈರಂಡಹಳ್ಳಿ ಗ್ರಾಮದ ಸರ್ವೆ ನಂ.15 ರಲ್ಲಿ 50 ಲಕ್ಷ ಮೌಲ್ಯದ 22 ಗುಂಟೆಯ ಒತ್ತುವರಿಯನ್ನು ತಹಸೀಲ್ದಾರ್ ಬಾಳಪ್ಪ ಹಂದಿಗುಂದ ನೇತೃತ್ವದ ತಂಡ ತೆರವು ಮಾಡಿತು. ದಕ್ಷಿಣ ತಾಲೂಕು, ತಾವರೆಕೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೆ ನಂ.116ರಲ್ಲಿ ಸರ್ಕಾರಿ ಗೋಮಾಳ ಜಾಗ 2007 ರಲ್ಲಿ ಬಿಎಂಟಿಸಿಗೆ ಮಂಜೂರಾಗಿದ್ದು, ಒತ್ತುವರಿ ತೆರವುಗೊಳಿಸಿ ಬಿಎಂಟಿಸಿಗೆ ನೀಡಲಾಯಿತು.

ಕೆಂಗೇರಿ ಹೋಬಳಿ ಚೂಡೇನಪುರ ಗ್ರಾಮದ ಸರ್ವೆ ನಂ.13 ರಲ್ಲಿ 1.6 ಎಕರೆ ಒತ್ತುವರಿಯನ್ನು ತಹಶೀಲ್ದಾರ್ ಬಿ.ಆರ್ .ದಯಾನಂದ್ ತಂಡ ತೆರವುಗೊಳಿಸಿತು. ಈ ಎರಡೂ ಜಮೀನು ಒಟ್ಟು ರು. 14.50 ಕೋಟಿ ಮೌಲ್ಯ ಹೊಂದಿದೆ. ಪೂರ್ವ ತಾಲೂಕು, ವರ್ತೂರು ಹೋಬಳಿ, ಗುಂಜೂರು ಗ್ರಾಮದ ಸರ್ವೆ ನಂ.281 ರಲ್ಲಿ 10 ಎಕರೆಯನ್ನು ಯಲ್ಲಪ್ಪ, ನರಸಿಂಗಯ್ಯ, ಉಜಿನಪ್ಪ, ಮುನಿಯಪ್ಪ ಹಾಗೂ ಎಂಬುವರು ಕೃಷಿಗಾಗಿ ಒತ್ತುವರಿ ಮಾಡಿಕೊಂಡಿದ್ದರು. ಅಂದಾಜು ರು.30 ಕೋಟಿ ಮೌಲ್ಯದ ಈ ಜಮೀನು ಒತ್ತುವರಿಯನ್ನು ತಹಶೀಲ್ದಾರ್ ಡಾ ಹರೀಶ್ ನಾಯ್ಕ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಆನೇಕಲ್ ತಾಲೂಕು, ಸರ್ಜಾಪುರ ಹೋಬಳಿ, ರಾಮನಾಯಕನಹಳ್ಳಿ ಗ್ರಾಮದ ಸರ್ವೆ ನಂ.29 ರಲ್ಲಿ 2 ಎಕರೆ, ಹುಸ್ಕೂರು ಗ್ರಾಮದ ಸರ್ವೆ ನಂಬರ್ ಕಾಣದ ಹದ್ದಿಗೆ ಹಳ್ಳದಲ್ಲಿ 8 ಎಕರೆ, ಜಿಗಣಿ ಹೋಬಳಿ ಬನ್ನೇರುಘಟ್ಟ ಗ್ರಾಮದ ಸರ್ವೆ ನಂ.54 ರಲ್ಲಿ 4.22 ಜಾಗದ ಒತ್ತುವರಿಯನ್ನು ತಹಸೀಲ್ದಾರ್ ಅನಿಲ್ ಕುಮಾರ್ ನೇತೃತ್ವದ ತಂಡ ತೆರವುಗೊಳಿಸಿತು. ಈ ಜಾಗ ರು.25 ಕೋಟಿ ಮೌಲ್ಯ ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT