ಜಿಲ್ಲಾ ಸುದ್ದಿ

ರು70 ಕೋಟಿ ಮೌಲ್ಯದ ಭೂ ಒತ್ತುವರಿ ತೆರವು

ಭೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಜಿಲ್ಲಾಡಳಿತ ಶನಿವಾರ ರು.70 ಕೋಟಿ ಮೌಲ್ಯದ 31.10 ಎಕರೆ ಭೂ ಒತ್ತುವರಿ ತೆರವು ಮಾಡಿದೆ...

ಬೆಂಗಳೂರು: ಭೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಜಿಲ್ಲಾಡಳಿತ ಶನಿವಾರ ರು.70 ಕೋಟಿ ಮೌಲ್ಯದ 31.10 ಎಕರೆ ಭೂ ಒತ್ತುವರಿ ತೆರವು ಮಾಡಿದೆ.

ಉತ್ತರ ತಾಲೂಕು, ದಾಸನಪುರ ಹೋಬಳಿ ಬೈರಂಡಹಳ್ಳಿ ಗ್ರಾಮದ ಸರ್ವೆ ನಂ.15 ರಲ್ಲಿ 50 ಲಕ್ಷ ಮೌಲ್ಯದ 22 ಗುಂಟೆಯ ಒತ್ತುವರಿಯನ್ನು ತಹಸೀಲ್ದಾರ್ ಬಾಳಪ್ಪ ಹಂದಿಗುಂದ ನೇತೃತ್ವದ ತಂಡ ತೆರವು ಮಾಡಿತು. ದಕ್ಷಿಣ ತಾಲೂಕು, ತಾವರೆಕೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೆ ನಂ.116ರಲ್ಲಿ ಸರ್ಕಾರಿ ಗೋಮಾಳ ಜಾಗ 2007 ರಲ್ಲಿ ಬಿಎಂಟಿಸಿಗೆ ಮಂಜೂರಾಗಿದ್ದು, ಒತ್ತುವರಿ ತೆರವುಗೊಳಿಸಿ ಬಿಎಂಟಿಸಿಗೆ ನೀಡಲಾಯಿತು.

ಕೆಂಗೇರಿ ಹೋಬಳಿ ಚೂಡೇನಪುರ ಗ್ರಾಮದ ಸರ್ವೆ ನಂ.13 ರಲ್ಲಿ 1.6 ಎಕರೆ ಒತ್ತುವರಿಯನ್ನು ತಹಶೀಲ್ದಾರ್ ಬಿ.ಆರ್ .ದಯಾನಂದ್ ತಂಡ ತೆರವುಗೊಳಿಸಿತು. ಈ ಎರಡೂ ಜಮೀನು ಒಟ್ಟು ರು. 14.50 ಕೋಟಿ ಮೌಲ್ಯ ಹೊಂದಿದೆ. ಪೂರ್ವ ತಾಲೂಕು, ವರ್ತೂರು ಹೋಬಳಿ, ಗುಂಜೂರು ಗ್ರಾಮದ ಸರ್ವೆ ನಂ.281 ರಲ್ಲಿ 10 ಎಕರೆಯನ್ನು ಯಲ್ಲಪ್ಪ, ನರಸಿಂಗಯ್ಯ, ಉಜಿನಪ್ಪ, ಮುನಿಯಪ್ಪ ಹಾಗೂ ಎಂಬುವರು ಕೃಷಿಗಾಗಿ ಒತ್ತುವರಿ ಮಾಡಿಕೊಂಡಿದ್ದರು. ಅಂದಾಜು ರು.30 ಕೋಟಿ ಮೌಲ್ಯದ ಈ ಜಮೀನು ಒತ್ತುವರಿಯನ್ನು ತಹಶೀಲ್ದಾರ್ ಡಾ ಹರೀಶ್ ನಾಯ್ಕ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಆನೇಕಲ್ ತಾಲೂಕು, ಸರ್ಜಾಪುರ ಹೋಬಳಿ, ರಾಮನಾಯಕನಹಳ್ಳಿ ಗ್ರಾಮದ ಸರ್ವೆ ನಂ.29 ರಲ್ಲಿ 2 ಎಕರೆ, ಹುಸ್ಕೂರು ಗ್ರಾಮದ ಸರ್ವೆ ನಂಬರ್ ಕಾಣದ ಹದ್ದಿಗೆ ಹಳ್ಳದಲ್ಲಿ 8 ಎಕರೆ, ಜಿಗಣಿ ಹೋಬಳಿ ಬನ್ನೇರುಘಟ್ಟ ಗ್ರಾಮದ ಸರ್ವೆ ನಂ.54 ರಲ್ಲಿ 4.22 ಜಾಗದ ಒತ್ತುವರಿಯನ್ನು ತಹಸೀಲ್ದಾರ್ ಅನಿಲ್ ಕುಮಾರ್ ನೇತೃತ್ವದ ತಂಡ ತೆರವುಗೊಳಿಸಿತು. ಈ ಜಾಗ ರು.25 ಕೋಟಿ ಮೌಲ್ಯ ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT