ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸಹಜ ಸ್ಥಿತಿಯತ್ತ ಶಿವಮೊಗ್ಗ

ಗಲಭೆಯಿಂದ ತತ್ತರಿಸಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಬೆಳಗಿನ ವೇಳೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಎಂದಿನಂತೆಯೇ ಇತ್ತು...

ಶಿವಮೊಗ್ಗ: ಗಲಭೆಯಿಂದ ತತ್ತರಿಸಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಬೆಳಗಿನ ವೇಳೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಎಂದಿನಂತೆಯೇ ಇತ್ತು. ಭಾನುವಾರದ್ದರಿಂದ ಮಧ್ಯಾಹ್ನದ ನಂತರ ಮುಚ್ಚಿದ್ದವು. ಬಸ್ ಆಟೋ ಸಂಚಾರ ಎಂದಿನಂತಿತ್ತು. ಔಷಧಾಲಯ, ಆಸ್ಪತ್ರೆ, ಹಾಲು ಸೇರಿದಂತೆ ಜನಜೀವನಕ್ಕೆ ತುರ್ತು ಅಗತ್ಯವಿದ್ದ ವಸ್ತುಗಳಿಗೆ ಯಾವುದೇ ತಡೆಯಾಗಲಿಲ್ಲ. ನಾಗರಿಕರು ಸಹ ಮಾಮೂಲಿ ಜೀವನಕ್ಕೆ ಮರಳಿದ್ದರು. ಸಂಜೆ ವಿನೋಬನಗರದ 100 ಅಡಿ ರಸ್ತೆಯಲ್ಲಿ ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಹಚ್ಚಿದ್ದ ಬೆಂಕಿಯನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನಂದಿಸಿದರು.

ಅದನ್ನು ಹೊರತುಪಡಿಸಿ ಶನಿವಾರ ಸಂಜೆ ನಂತರ ಅಹಿತಕರ ಘಟನೆಗಳು ನಡೆದಿಲ್ಲ. ಶನಿವಾರ ರಾತ್ರಿ ನಗರಾದ್ಯಂತ ಕಾರ್ಯಾಚರಣೆ ನಡೆಸಿದ ಪೊಲೀಸರು 100ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ; ಆದರೆ ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

SCROLL FOR NEXT