ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸ್ನೇಹಿತನನ್ನೇ ಅಪಹರಿಸಿ ಕೊಲೆ

ಸಾಲವನ್ನು ಹಿಂತಿರುಗಿಸದ ಕಾರಣ ಯುವಕರ ಗುಂಪೊದು ಸ್ನೇಹಿತನನ್ನು ಅಪಹರಿಸಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು: ಸಾಲವನ್ನು ಹಿಂತಿರುಗಿಸದ ಕಾರಣ ಯುವಕರ ಗುಂಪೊದು ಸ್ನೇಹಿತನನ್ನು ಅಪಹರಿಸಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಾಗರಬಾವಿ ಐಟಿಐ ಲೇಔಟ್‍ನ ಹೇಮಂತ್ (27) ಕೊಲೆಯಾದ ಯುವಕ. ವೆಸ್ಟ್ ಆಫ್  ಕಾರ್ಡ್ ರಸ್ತೆಯ ಇಸ್ಕಾನ್ ದೇವಾಲಯದ ಬಳಿಯ ಕಮಲಮ್ಮನ ಗುಂಡಿ ಮೈದಾನದಲ್ಲಿ ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಅದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಹರಣದ ಘಟನೆ ಬಗ್ಗೆ ಮೃತರ ಕುಟುಂಬ ಸದಸ್ಯರಿಂದ ಸಂಪೂರ್ಣ ಮಾಹಿತಿ ಪಡೆದ ಪೊಲೀಸರು, ಘಟನೆಗೆ ಕಾರಣ ಎನ್ನಲಾದ ಪ್ರಮುಖ ಆರೋಪಿ ಕೃಷ್ಣಮೂರ್ತಿ ಮತ್ತು ಆತನ ಸಹಚರರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕ ಪ್ರಜಾ ವೇದಿಕೆ ಸಂಘಟನೆ ಸದಸ್ಯ ಹೇಮಂತ್, ಕೆಲ ತಿಂಗಳ ಹಿಂದೆ ಕೃಷ್ಣಮೂರ್ತಿ ಬಳಿ ಸಾಲ ಪಡೆದಿದ್ದ. ಆದರೆ, ಹಿಂದಿರುಗಿಸಲಿಲ್ಲ ಎಂಬ ಕಾರಣಕ್ಕೆ ಇಬ್ಬರ ನಡುವೆ ಮನಸ್ತಾಪವಾಗಿ ಜಗಳವಾಗಿತ್ತು. ಹಾಗಾಗಿ ಹೇಮಂತ್ ವಿರುದ್ಧ ಕೋಪಗೊಂಡಿದ್ದ ಕೃಷ್ಣಮೂರ್ತಿ ಹತ್ಯೆ ಸಂಚು ರೂಪಿಸಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT