ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸ್ನೇಹಿತನನ್ನೇ ಅಪಹರಿಸಿ ಕೊಲೆ

ಸಾಲವನ್ನು ಹಿಂತಿರುಗಿಸದ ಕಾರಣ ಯುವಕರ ಗುಂಪೊದು ಸ್ನೇಹಿತನನ್ನು ಅಪಹರಿಸಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು: ಸಾಲವನ್ನು ಹಿಂತಿರುಗಿಸದ ಕಾರಣ ಯುವಕರ ಗುಂಪೊದು ಸ್ನೇಹಿತನನ್ನು ಅಪಹರಿಸಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಾಗರಬಾವಿ ಐಟಿಐ ಲೇಔಟ್‍ನ ಹೇಮಂತ್ (27) ಕೊಲೆಯಾದ ಯುವಕ. ವೆಸ್ಟ್ ಆಫ್  ಕಾರ್ಡ್ ರಸ್ತೆಯ ಇಸ್ಕಾನ್ ದೇವಾಲಯದ ಬಳಿಯ ಕಮಲಮ್ಮನ ಗುಂಡಿ ಮೈದಾನದಲ್ಲಿ ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಅದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಹರಣದ ಘಟನೆ ಬಗ್ಗೆ ಮೃತರ ಕುಟುಂಬ ಸದಸ್ಯರಿಂದ ಸಂಪೂರ್ಣ ಮಾಹಿತಿ ಪಡೆದ ಪೊಲೀಸರು, ಘಟನೆಗೆ ಕಾರಣ ಎನ್ನಲಾದ ಪ್ರಮುಖ ಆರೋಪಿ ಕೃಷ್ಣಮೂರ್ತಿ ಮತ್ತು ಆತನ ಸಹಚರರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕ ಪ್ರಜಾ ವೇದಿಕೆ ಸಂಘಟನೆ ಸದಸ್ಯ ಹೇಮಂತ್, ಕೆಲ ತಿಂಗಳ ಹಿಂದೆ ಕೃಷ್ಣಮೂರ್ತಿ ಬಳಿ ಸಾಲ ಪಡೆದಿದ್ದ. ಆದರೆ, ಹಿಂದಿರುಗಿಸಲಿಲ್ಲ ಎಂಬ ಕಾರಣಕ್ಕೆ ಇಬ್ಬರ ನಡುವೆ ಮನಸ್ತಾಪವಾಗಿ ಜಗಳವಾಗಿತ್ತು. ಹಾಗಾಗಿ ಹೇಮಂತ್ ವಿರುದ್ಧ ಕೋಪಗೊಂಡಿದ್ದ ಕೃಷ್ಣಮೂರ್ತಿ ಹತ್ಯೆ ಸಂಚು ರೂಪಿಸಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT