ಜಿಲ್ಲಾ ಸುದ್ದಿ

ಅನುದಾನ ದುರ್ಬಳಕೆ ವಿರೋಧಿಸಿ ಪ್ರತಿಭಟನೆ

ಸೂರು ಯೋಜನೆಯಡಿ ಬಿಡುಗಡೆಯಾಗಿದ್ದ ಅನುದಾನದ ಹಣವನ್ನು ವಿಜಯನಗರ ವಿಭಾಗದ ಎಂಜಿನಿಯರ್‍ಗಳು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಮತ್ತು ಮೈನಾರಿಟಿ ಸೇನೆ ಸಂಘಟನೆ ಕಾರ್ಯಕರ್ತರು ಸೋಮವಾರ ಬಿಬಿಎಂಪಿ ಕೇಂದ್ರ...

ಬೆಂಗಳೂರು: ಸೂರು ಯೋಜನೆಯಡಿ ಬಿಡುಗಡೆಯಾಗಿದ್ದ ಅನುದಾನದ ಹಣವನ್ನು ವಿಜಯನಗರ ವಿಭಾಗದ ಎಂಜಿನಿಯರ್‍ಗಳು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಮತ್ತು ಮೈನಾರಿಟಿ ಸೇನೆ ಸಂಘಟನೆ ಕಾರ್ಯಕರ್ತರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಪಾಲಿಕೆಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ವಿಜಯನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಹಾಗೂ ವಾರ್ಡ್ 134ರ ಸಹಾಯಕ ಎಂಜಿನಿಯರ್ ರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಬೆಂಗಳೂರು ಜಿಲ್ಲಾ ಯುವಘಟಕದ ಅಧ್ಯಕ್ಷ ರಂಗಸ್ವಾಮಿ ಆಗ್ರಹಿಸಿದರು. ರಾಜಕಾಲುವೆಯ ಪಕ್ಕದಲ್ಲೇ 33 ನಿವೇಶನಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮನೆಗಳು ವಾಸಕ್ಕೆ ಯೋಗ್ಯವಿಲ್ಲ. ಈಗಾಗಲೇ 6 ಅಡಿ ಅಗಲ, 7 ಅಡಿ ಉದ್ದದ 14 ಮನೆಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ ಫಲಾನುಭವಿಗಳಿಗೆ ಕಾರ್ಯಾದೇಶ ಪ್ರತಿಯನ್ನು ನೀಡಲು ಅಲೆದಾಡಿಸುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ರಾಜಕಾಲುವೆ ಪಕ್ಕದಲ್ಲಿ ಮನೆ ನಿರ್ಮಾಣ ಕಾನೂನು ಬಾಹಿರ.

ಈ ಸಂಬಂಧ ಹಾಲಿ ಸದಸ್ಯ ಹಾಗೂ ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷರಾಗಿರುವ ಟಿ.ವಿ. ಕೃಷ್ಣ ಅವರ ಗಮನಕ್ಕೆ ತಂದರೂ ಪ್ರಯೋಜನವಾಗಲಿಲ್ಲ ಎಂದು ಅವರು ದೂರಿದರು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT