ಗಾಲಿ ಜನಾರ್ದನ ರೆಡ್ಡಿ 
ಜಿಲ್ಲಾ ಸುದ್ದಿ

ಜನಾರ್ದನ ರೆಡ್ಡಿ ಹೆಸರಲ್ಲಿ ನಕಲಿ ಫೇಸ್‌ಬುಕ್: ಸಿಐಡಿ ಪೊಲೀಸರಿಗೆ ದೂರು

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೆಸರಲ್ಲಿ ಯಾರೋ ಅಪರಿಚಿತರು ಫೇಸ್‌ಬುಕ್ ಅಕೌಂಟ್ ತೆರೆದು ಇಲ್ಲ ಸಲ್ಲದ ಮಾಹಿತಿಗಳನ್ನು ಅಪ್‌ಲೋಡ್ ಮಾಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಆಪ್ತ ಸಹಾಯಕ ವಿ. ಶಿವಕುಮಾರ್ ಸಿಐಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ನನ್ನ ಹೆಸರಿನಲ್ಲಿ ಕೆಲವರು ಸಾಮಾಜಿಕ ತಾಣ(ಫೇಸ್‌ಬುಕ್) ತೆರೆದು ನನ್ನ ಘನತೆಗೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸಿದ್ದು, ಸಾಮಾಜಿಕ ತಾಣದಿಂದ ನನ್ನ ವ್ಯಕ್ತಿತ್ವಕ್ಕೆ ಆಗುವ ಮುಜುಗರವನ್ನು ತಪ್ಪಿಸಬೇಕು. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಸಿಐಡಿ ಪೊಲೀಸರನ್ನು ಮನವಿ ಮಾಡಿರುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ನಾನು ವೈಯಕ್ತಿಕವಾಗಿ ಯಾವುದೇ ಫೇಸ್‌ಬುಕ್ ಖಾತೆ ಹೊಂದಿಲ್ಲ. ಯಾರೋ ಅಪರಿಚಿತರು ಅಭಿಮಾನಿ ಬಳಗದ ಖಾತೆ ತೆಗೆದು ಇಲ್ಲ ಸಲ್ಲದ ಮಾಹಿತಿಗಳನ್ನು ಅಪ್‌ಲೋಡ್ ಮಾಡುತ್ತಿದ್ದಾರೆ. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸಿಐಡಿ ಪೊಲೀಸರಿಗೆ ಇಂದು ತಮ್ಮ ಆಪ್ತ ಸಹಾಯಕ ವಿ.ಶಿವಕುಮಾರ್ ಅವರ ಮೂಲಕ ಜನಾರ್ಧನ್ ರೆಡ್ಡಿ ದೂರು ಸಲ್ಲಿಸಿದ್ದಾರೆ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಈಗಾಗಲೇ  ಜನಾರ್ಧನ್ ರೆಡ್ಡಿಯವರು ಮಾನಸಿಕವಾಗಿ ನೊಂದಿದ್ದಾರೆ. ಇದರ ನಡುವೆ ಫೇಸ್‌ಬುಕ್‌ನಲ್ಲಿ ಮತ್ತಷ್ಟು ಮನಸ್ಸಿಗೆ ನೋವು ಮಾಡುವಂತಹ ಕಾಮೆಂಟ್ಸ್‌ಗಳು ಅಪ್‌ಲೋಡ್ ಆಗುತ್ತಿರುವುದು ಬೇಸರ ತರಿಸಿದೆ. ಕೂಡಲೇ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT