ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಿಡಿಗೇಡಿಗಳಿಂದ ಚರ್ಚ್ ಮೇಲೆ ದಾಳಿ

ನಗರದಲ್ಲಿ ಮತ್ತೆ ಚರ್ಚ್ ಮೇಲೆ ದಾಳಿ ನಡೆದಿದ್ದು, ಮಂಗಳೂರಿನ ಕೋಟೆಗಾರು ಬಳಿಯ ಚರ್ಚ್ ಹೊರಾಂಗಣದಲ್ಲಿರುವ ಮರ್ಸಿಯಮ್ಮ ಮಾತೆ ಪಾರ್ಥನಾ ಮಂದಿರದ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ...

ಮಂಗಳೂರು: ನಗರದಲ್ಲಿ ಮತ್ತೆ ಚರ್ಚ್ ಮೇಲೆ ದಾಳಿ ನಡೆದಿದ್ದು, ಮಂಗಳೂರಿನ ಕೋಟೆಗಾರು ಬಳಿಯ ಚರ್ಚ್ ಹೊರಾಂಗಣದಲ್ಲಿರುವ ಮರ್ಸಿಯಮ್ಮ ಮಾತೆ ಪಾರ್ಥನಾ ಮಂದಿರದ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ.

ದುಷ್ಕರ್ಮಿಗಳ ಕಲ್ಲು ತೂರಾಟದಿಂದ ಮಂದಿರದ ಕಿಟಕಿ ಗಾಜುಗಳು ಒಡೆದು ಹೋಗಿದ್ದು, ಸ್ಥಳದಲ್ಲಿ ಮದ್ಯದ ಬಾಟಲಿ ಹಾಗೂ ಸಿಗರೇಟ್‌ಗಳು ದೊರೆತಿರುವುದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದ್ ಅವರು, ಕೆಲವು ಸಮಾಜಘಾತುಕ ಶಕ್ತಿಗಳು ಜನರಲ್ಲಿ ಆತಂಕ ಸೃಷ್ಟಿಸಿ, ಶಾಂತಿಯನ್ನು ಕದಡುವ ಸಲುವಾಗಿ ಈ ರೀತಿ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇಂತಹ ಕೃತ್ಯಗಳಿಂದ ಜನರು ಹೆದರಬಾರದು ಎಂದು ಅಭಯವನ್ನು ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಸಿಗರೇಟು ಮದ್ಯಪಾನದ ಬಾಟಲಿಗಳನ್ನು ನೋಡಿದರೆ ಈ ಕೃತ್ಯವನ್ನು ಸಣ್ಣ ಗುಂಪು ಮಾಡಿರುವುದಾಗಿ ತಿಳಿದುಬಂದಿದೆ. ಆರೋಪಿಗಳನ್ನು ಹಿಡಿಯಲು ಸಾರ್ವಜನಿಕರು ಪೊಲೀಸರೊಂದಿಗೆ ಕೈಜೋಡಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT