ಹಾಸನದಲ್ಲಿ ಭೂಕಂಪನ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಹಾಸನದ ಹಲವೆಡೆ ಭೂಕಂಪನ..!

ಹಾಸನ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವವಾಗಿದ್ದು, ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ...

ಹಾಸನ: ಹಾಸನ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವವಾಗಿದ್ದು, ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ.

ಹಾಸನ ಜಿಲ್ಲೆಯ ಮೂಡಿಗೆರೆ, ಆಲೂರು ಮತ್ತು ಬೇಲೂರಿನಲ್ಲಿ ಭೂಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಭೂಮಿ ಸುಮಾರು 5 ಸೆಕೆಂಟ್‌ಗಳ ಕಂಪಿಸಿದ್ದು, ಬೆಳಗ್ಗೆ 6.54ರಿಂದ 7 ಗಂಟೆಯವರೆಗೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಭೂಮಿ ನಡುಗುತ್ತಿದ್ದಂತೆಯೇ ಮೂಡಿಗೆರೆಯಲ್ಲಿ ಕೆಲ ಮನೆಗಳಲ್ಲಿ ಪಾತ್ರೆಗಳು ನೆಲಕ್ಕುರುಳಿದ್ದು, ಘಟನೆಯಿಂದ ಭಯಭೀತಗೊಂಡ ಜನ ಹೊರಗೆ ಓಡಿಬಂದಿದ್ದಾರೆ.

ಚಿಕ್ಕಮಗಳೂರಿನಲ್ಲಿಯೂ ಇಂತಹುದೇ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಹಾಸನ ಜಿಲ್ಲಾ ಎಸಿ ಮಧುಕೇಶ್ವರ ಅವರು, ಭೂಕಂಪನದ ಅನುಭವವಾದ ಕುರಿತು ಮಾಹಿತಿ ಬಂದಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ವರದಿ ತರಿಸಿಕೊಳ್ಳುತ್ತೇನೆ. ಭೂಕಂಪನ ಪ್ರದೇಶಗಳಿಗೆ ತೆರಳಿ ವೀಕ್ಷಿಸುತ್ತೇನೆ ಎಂದು ಹೇಳಿದರು.

ಆಂಧ್ರದಲ್ಲೂ ಕಂಪಿಸಿದ ಭೂಮಿ
ಇದೇ ವೇಳೆ ನೆರೆಯ ಆಂಧ್ರ ಪ್ರದೇಶ ರಾಜ್ಯದಲ್ಲಿಯೂ ಭೂಮಿಕಂಪಿಸಿದ ಅನುಭವವಾಗಿದೆ. ಆಂಧ್ರದ ಗುಂಟೂರು ಜಿಲ್ಲೆಯ 10 ಗ್ರಾಮಗಳಲ್ಲಿ ಮತ್ತು ಪ್ರಕಾಶಂ ಜಿಲ್ಲೆಯ 7 ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ.

ಒಟ್ಟಾರೆ ಇಂದು ಬೆಳ್ಳಂ ಬೆಳ್ಳಗ್ಗೆ ಸಂಭವಿಸಿದ ಕಡಿಮೆ ತೀವ್ರತೆಯ ಭೂಕಂಪನ ಜನತೆಯಲ್ಲಿ ಭೀತಿ ಸೃಷ್ಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT