ಹೈಕೋರ್ಟ್ 
ಜಿಲ್ಲಾ ಸುದ್ದಿ

ಭಾಷಾ ಮಾಧ್ಯಮ:ಸರ್ಕಾರದ ನಿಲುವು ತಿಳಿಸಲು ಕಾಲಾವಕಾಶ ಕೋರಿಕೆಗೆ ಕೋರ್ಟ್ ನಿರಾಕರಣೆ

ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ಸರ್ಕಾರ ತನ್ನ ಸ್ಪಷ್ಟ ನಿಲುವು ತಿಳಿಸಲು ಒಂದು ತಿಂಗಳುಕಾಲವಕಾಶ ...

ಬೆಂಗಳೂರು: ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ಸರ್ಕಾರ ತನ್ನ ಸ್ಪಷ್ಟ ನಿಲುವು ತಿಳಿಸಲು ಒಂದು ತಿಂಗಳುಕಾಲವಕಾಶ ನೀಡಬೇಕೆಂಬ ಕೋರಿಕೆ ಯನ್ನು ಹೈಕೋರ್ಟ್ ನಿರಾಕರಿಸಿದೆ. ಹೊಸದಾಗಿ ಆರಂಭವಾಗುವ ಶಾಲೆಗಳಲ್ಲಿ 1-5ನೇ ತರಗತಿವರೆಗೆ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕೆಂದು ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಸಂಯೋ ಜನಾ ಸಂಸ್ಥೆ (ಕೆಎಎಂಎಸ್) ಹೈಕೋರ್ಟ್‍ನಲ್ಲಿ ಅರ್ಜಿ ದಾಖಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಬುಧವಾರ ವಿಚಾರಣೆ ಮುಂದುವರಿಸಿದ ನ್ಯಾ.ಬಿ.ವಿ.ನಾಗರತ್ನ ಅವರ ಪೀಠ, ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಪು ನೀಡಿದೆ. ಹೈಕೋರ್ಟ್ ಸುಪ್ರೀಂನ ತೀರ್ಪಿಗೆ ಬದ್ದವಾಗಿರಬೇಕು. ಅಲ್ಲದೇ ಇದರಿಂದ ನೂತನ ಶಾಲೆ ಹಾಗೂ ಈಗಿರುವ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಇದು ಅಡ್ಡಿಯಾಗಬಾರದು ಎಂದು
ಅಭಿಪ್ರಾಯಪಟ್ಟು ವಿಚಾರಣೆ ಶುಕ್ರವಾರಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ರಾಜ್ಯ ಅಡ್ವೊಕೇಟ್ ಜನರಲ್  ಫ್ರೊ ರವಿವರ್ಮ ಕುಮಾರ್ ವಾದ ಮಂಡಿಸಿ, ಭಾಷಾ ಮಾಧ್ಯಮದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಂಡಿದ್ದು, ಪರಿಹಾರಾತ್ಮಕ ಅರ್ಜಿ ದಾಖಲಿಸಿದ್ದೇವೆ. ಈ ಅರ್ಜಿ ಇನ್ನೂ ಇತ್ಯರ್ಥವಾಗಬೇಕಿದೆ. ಮಾತ್ರವಲ್ಲದೇ ಮಾರ್ಚ್ ತಿಂಗಳಲ್ಲಿ ಆರಂಭವಾಗುವ ಮುಂದಿನ ಅಧಿವೇಶನದಲ್ಲಿ ಈ ಕುರಿತು ಚರ್ಚೆ ಆಗಬೇಕಿದೆ. ಆದ್ದರಿಂದ ಒಂದು ತಿಂಗಳು ಕಾಲಾವಕಾಶ ನೀಡಬೇಕೆಂದು ಕೋರಿದರು. ಇದನ್ನು ನ್ಯಾಯಾಲಯ ತಳ್ಳಿಹಾಕಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT