ಬೆಟ್ಟಿಂಗ್ ದಂಧೆ 
ಜಿಲ್ಲಾ ಸುದ್ದಿ

ಬೆಟ್ಟಿಂಗ್ ಅಡ್ಡೆಗಳ ಮೇಲೆ ದಾಳಿ: ಐದು ಜನರ ಬಂಧನ

ಬೆಂಗಳೂರು: ವಿಶ್ವಕಪ್ ಕ್ರಿಕೆಟ್ ಕಾವು ದಿನೇದಿನೆ ಹೆಚ್ಚಾಗುತ್ತಿದ್ದಂತೆ ನಗರದಲ್ಲಿ ಬೆಟ್ಟಿಂಗ್ ದಂಧೆ ಏರುಗತಿಯಲ್ಲಿ ಸಾಗಿದೆ.

ಗುರುವಾರ ಒಂದೇ ದಿನ ಸಿಸಿಬಿ ಪೊಲೀಸರು ಮೂರು ಬೆಟ್ಟಿಂಗ್ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಸ್ಕಾಟ್‍ಲ್ಯಾಂಡ್ ಹಾಗೂ ಅಫ್ಘಾನಿಸ್ತಾನ ನಡುವಿನ ಪಂದ್ಯಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕಾಶ್ ಬಿಎನ್(38), ರಾಘವೇಂದ್ರ(29) ಹಾಗೂ ಠಾಕೂರಾಮ್(45) ಬಂಧಿತರು. ಇವರಿಂದ ರು. 10.60 ಲಕ್ಷ ನಗದು, 1 ಟಿವಿ, 1 ಲ್ಯಾಪ್‍ಟಾಪ್, ಬೆಟ್ಟಿಂಗ್ ಸಾಫ್ಟ್ ವೇರ್‍ಅನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಇಟ್ಟುಮಡು ಸಮೀಪದ ಕೃಷ್ಣಯ್ಯ ಬಡಾವಣೆಯ ಮನೆಯೊಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ದಾಳಿ ನಡೆಸಿ ಮೂವರನ್ನು ಬಂಧಿಸಿದೆ.

ಗಿರಿನಗರ:
ಬಾಂಗ್ಲಾದೇಶ ಹಾಗೂ ಶ್ರೀಲಂಕಾ ನಡುವಿನ ಪಂದ್ಯಕ್ಕೆ 23:25 ಅನುಪಾತದಲ್ಲಿ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ ಬುಕ್ಕಿ ಮಂಜುನಾಥ(32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಸಮೀಪದ ಹೊಸಕೆರೆಹಳ್ಳಿಯಲ್ಲಿ ಆರೋಪಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ಈತನಿಂದ 1 ಲ್ಯಾಪ್ ಟಾಪ್ ಹಾಗೂ 1 ಡೋಂಗಲ್ ವಶಪಡಿಸಿಕೊಳ್ಳಲಾಗಿದೆ. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವೇಶ್ವರ ನಗರ: ಸಮೀಪದ ಶಕ್ತಿ ಗಣಪತಿ ನಗರದಲ್ಲಿ ಕ್ರಿಕೆಟ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಸತೀಶ ಎಂಬಾತನನ್ನು ಬಂಧಿಸಿ ರು. 2.39 ಲಕ್ಷ ನಗದು, 3 ಮೊಬೈಲ್ ಫೋನ್‍ಗಳು, ಬೆಟ್ಟಿಂಗ್ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT